September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

ಉಜಿರೆ :ಆ19, “ಸಂಸ್ಕೃತ ಭಾಷೆ ಎಲ್ಲ ಭಾಷೆಗಳ ಜನನಿ. ಭಾರತದ ಪ್ರತಿಷ್ಠೆ ಎರಡು. ಮೊದಲನೆಯದು ಸಂಸ್ಕೃತಿ, ಎರಡನೆಯದು ಸಂಸ್ಕೃತ.” ಎಂದು ಸಂಸ್ಕೃತ ವಿದ್ವಾಂಸರು ಹಾಗೂ ಜೋತಿಷ್ಯರು ಆಗಿರುವ ಡಾ.ಯತೀಶ್ ಪೊದುವಾಳ್ ಇವರು ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ‘ಆತ್ಮಾನಂ ಸಂಸ್ಕೃತಂ ಮನ್ಯೆ’ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿದ್ದ ‘ಸಂಸ್ಕೃತೋತ್ಸವ’ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಕೃತ ಜಯ ಘೋಷಗಳೊಂದಿಗೆ ಮೆರವಣಿ, ಸಂಸ್ಕೃತ ವಸ್ತು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಶಾಲಾ ಶೈಕ್ಷಣಿಕ ಸಂಯೋಜಕಿ ಶಿಕ್ಷಕಿ ಸುಮಾ ಶ್ರೀನಾತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿಯರಾದ ಇನಿಕ ಮತ್ತು ಹರ್ಷಿಣಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಆಶುತೋಷ್ ಹಾಗೂ ದೀಪ್ತಿ ಜೈನ್ ಸ್ವಾಗತಿಸಿ, ಕಾರ್ಯಕ್ರಮದ ಸಂಯೋಜಕಿ ಶಿಕ್ಷಕಿ ಸುಜನ ವಲ್ತಾಜೆ ವಂದಿಸಿದರು.

Related posts

ಮೇ 20,21: ಸಿಇಟಿ ಪರೀಕ್ಷೆ

Suddi Udaya

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

Suddi Udaya

ಕಳೆಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿ ದಿಯಾ ಆಳ್ವ ದ್ವಿತೀಯ

Suddi Udaya

ಧರ್ಮಸ್ಥಳ: ಟಾಟಾ ಸುಮೋ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!