23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

ಕಡಿರುದ್ಯಾವರ : ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಗ್ರಾಮ ಇದರ ವತಿಯಿಂದ ಕಡಿರುದ್ಯಾವರ ಗ್ರಾಮದಲ್ಲಿ ಕಾಡಾನೆ ಉಪಟಳವನ್ನು ಶಾಶ್ವತವಾಗಿ ತಪ್ಪಿಸುವ ಸಲುವಾಗಿ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆ ಮಾಡುವ ಮುಖ್ಯ ಬೇಡಿಕೆಯೊಂದಿಗೆ ಇನ್ನೂ ಅನೇಕ ಬೇಡಿಕೆಗಳೊಂದಿಗೆ ಶಾಸಕ ಹರೀಶ್ ಪೂಂಜಾ ಇವರಿಗೆ, ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರಿಗೆ ಹಾಗೂ ವಲಯ ಅರಣ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಸಂತೋಷ್ ಗೌಡ ವಳಂಬ್ರ, ಪಧಾನ ಕಾರ್ಯದರ್ಶಿ ಪ್ರಸಾದ್ ಗೌಡ ಕುಚ್ಚೂರು, ಸಂಚಾಲಕರುಗಳಾದ ಕಿರಣ್ ಹೆಬ್ಬಾರ್ ಶಿರಿಬೈಲು, ಜೋರ್ಜ್ ಟಿವಿ ಮಲ್ಲಡ್ಕ, ಲಿಜೋ ಸ್ವರಿಯ ಬಲ್ಲಾಲ್ ಬೆಟ್ಟು, ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ, ಉದಯ ಗೌಡ ಪನಿಕಲ್ಲು, ಸಂತೋಷ್ ಬಲ್ಲಾಲ್ ಬೆಟ್ಟು ಕಾನೂನು ಸಲಹೆಗಾರರಾದ ಗಣೇಶ್ ಗೌಡ ಬರಮೇಲು, ಮಾಧ್ಯಮ ಸಂಚಾಲಕರಾದ ಬಾಲಚಂದ್ರ ನಾಯಕ್ ಹೇಡ್ಯಾ, ಪ್ರವೀನ್ ಗೌಡ ನರ್ತಂಡ ಮುಂತಾದವರು ಉಪಸ್ಥಿತರಿದ್ದರು.

Related posts

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರ : ಆಕಾಶಕಾಯಗಳ ವೀಕ್ಷಣೆ

Suddi Udaya

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya
error: Content is protected !!