July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆಯ ಸಭೆಯು ನಾರಾವಿ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ಆ.18 ರಂದು ನಡೆಯಿತು.

ಮೇಲ್ವಿಚಾರಕರಾದ ದಮಯಂತಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ವಲಯದಲ್ಲಿ ಒಟ್ಟು 15 ಭಜನಾ ಮಂಡಳಿಗಳಿದ್ದು ಇದರಲ್ಲಿ ಒಬ್ಬರು ಸಂಚಾಲಕರು ಹಾಗೂ 5 ಮಂದಿ ಪದಾಧಿಕಾರಿಗಳ ಅಯ್ಕೆ ಮಾಡುವ ಬಗ್ಗೆ ತಿಳಿಸಿದರು. ನಂತರ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸಂಚಾಲಕರಾಗಿ ಸಂತೋಷ್ ಮರ್ದೋಟ್ಟು, ಅಧ್ಯಕ್ಷರಾಗಿ ರಾಜು ಪೂಜಾರಿ, ಉಪಾಧ್ಯಕ್ಷರಾಗಿ ಸುಧಾಕರ, ಕಾರ್ಯದರ್ಶಿ ಹರೀಶ್ ಯನ್, ಜತೆ ಕಾರ್ಯದರ್ಶಿ ಅಕ್ಷಯ್, ಕೋಶಾಧಿಕಾರಿಯಾಗಿ ಚಂದ್ರ ಶೇಖರ ರಾವ್ , ಹಾಗೂ ಯೋಗೀಶ್ ಆಚಾರ್ಯ, ಇವರನ್ನು ಭಜನಾ ಮಂಡಳಿಯ ಸದಸ್ಯರ ಉಪಸ್ಥಿತಿಯಲ್ಲಿ ಆಯ್ಕೆ ಮಾಡಲಾಯಿತು. ನಾರಾವಿ ಸೇವಾ ಪ್ರತಿನಿಧಿ ರೇಷ್ಮಾ ಉಪಸ್ಥಿತರಿದ್ದರು.

ಸೇವಾ ಪ್ರತಿನಿಧಿ ಹರಿಣಾಕ್ಷಿ ಸ್ವಾಗತಿಸಿದರು. ಸಭೆಯ ಕೊನೆಗೆ ಕೊಕ್ರಾಡಿ ಸಾವ್ಯ ಸೇವಾಪ್ರತಿನಿಧಿ ಶಶಿಧರ್ ಕುಲಾಲ್ ಧನ್ಯವಾದವಿತ್ತರು.

Related posts

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಜಿಲ್ಲಾ ಮಟ್ಟದ ಭಾರತ್ ಸ್ಕೌಟ್ಸ್, ಗೈಡ್ಸ್ ಪ್ರತಿಭಾ ಕಲೋತ್ಸವ: ವಾಣಿ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ಬದನಾಜೆ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಸೇವಾ ನಿವೃತ್ತಿ

Suddi Udaya

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya
error: Content is protected !!