July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 6.74 ಲಕ್ಷ ಲಾಭ, ಶೇ.20 ಡಿವಿಡೆಂಟ್

ಬಳಂಜ: ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ 2023-24 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಶ್ರೀಮತಿ ಪುಷ್ಪಾರವರ ಅಧ್ಯಕ್ಷತೆಯಲ್ಲಿ ಆ.17 ರಂದು ಭಾಗಿ ಮುಂಡಪ್ಪ ಪೂಜಾರಿ ಸಭಾ ವೇದಿಕೆಯಲ್ಲಿ ಜರುಗಿತು.

ಸಂಘವು ರೂ.6.74 ಲಕ್ಷ ಲಾಭಗಳಿಸಿದ್ದು, ಸದಸ್ಯರಿಗೆ ಶೇ.65 ಬೋನಸ್ ಹಾಗೂ ಶೇ.20 ಡಿವಿಡೆಂಟ್ ನೀಡಲಾಗುವುದು.

ದ.ಕ ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಡಾ. ಸತೀಶ್ ರಾವ್ ಹಾಗೂ ವಿಸ್ತರಣಾಧಿಕಾರಿ ಸುಚಿತ್ರಾ ರವರು ಸಭೆಯಲ್ಲಿ ಸದಸ್ಯರಿಗೆ ಹೈನುಗಾರಿಕಾ ಮಾಹಿತಿಯನ್ನು ನೀಡಿದರು. ಉಪಾಧ್ಯಕ್ಷೆ ಮಾಲಿನಿ , ಶಾಂಭವಿ, ಅರುಣಾ ನಿರುಪಮಾ, ಉಷಾ, ಜಯಂತಿ, ಶೋಭಾ, ಯಶೋಧಾ, ಬೇಬಿ, ಉಪಸ್ಥಿತರಿದ್ದರು.

ಮುಖ್ಯ ನಿರ್ವಹಣಾಧಿಕಾರಿ ಭಾರತಿ ವರದಿ ಮತ್ತು ಲೆಕ್ಕ ಪತ್ರಗಳನ್ನು ಮಂಡಿಸಿದರು. ಸಂಘದ ಹಿರಿಯ ಹೈನುಗಾರರು , ನಿರ್ದೇಶಕರು ಆದ ಯಶೋದ ರವರನ್ನು ಸನ್ಮಾನಿಸಲಾಯಿತು. ಸಂಘಕ್ಕೆ ಅತೀ ಹೆಚ್ಚು ಹಾಲು ಹಾಕಿ ಪ್ರಥಮ ಸ್ಥಾನ ಪಡೆದ ಪ್ರಮೀಳಾ, ದ್ವಿತೀಯ ನಂದಿನಿ, ತೃತೀಯ ಮಾಲಿನಿ ಹಾಗೂ 9 ಜನ ಅತೀ ಹೆಚ್ಚು ಹಾಕಿದ ಗುಣವತಿ , ಮುಕ್ತಾ, ಅರುಣ ಹೆಗ್ಡೆ, ಹರ್ಷಿಣಿ, ಸುಖಾರೈ, ಜಯಶ್ರೀ, ಪುಷ್ಪಾ, ಹರ್ಷಲತಾ, ಉಷಾ ಇವರನ್ನು ಸಭೆಯಲ್ಲಿ ಗುರುತಿಸಲಾಯಿತು. ಎಸ್.ಎಸ್.ಎಲ್.ಸಿ ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಮನ್ವಿತಾ ಹಾಗೂ ರಕ್ಷಿತ್ ಗೆ ವಿದ್ಯಾರ್ಥಿ ವೇತನ ನೀಡಲಾಯಿತು.

ನಿರ್ದೇಶಕರಾದ ನಿರುಪಮಾ ಸ್ವಾಗತಿಸಿ, ಸದಸ್ಯೆ ನಂದಿನಿ ನಿರೂಪಿಸಿದರು. ಉಪಾಧ್ಯಕ್ಷೆ ಮಾಲಿನಿ ವಂದಿಸಿದರು. ಸಭೆಯಲ್ಲಿ ಸಂಘಕ್ಕೆ ಸ್ಥಳ ದಾನ ,ಮಾಡಿದಂತಹ ಹೆಚ್. ಧರ್ಣಪ್ಪ ಪೂಜಾರಿ ಯವರು ಉಪಸ್ಥಿತರಿದ್ದರು. ಸಿಬ್ಬಂದಿಗಳಾದ ಸುರೇಶ್ ಪೂಜಾರಿ ಜೈಮಾತಾ ಹಾಗೂ ರೇಶ್ಮಾ ಸಹಕರಿಸಿದರು.

Related posts

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಸ.ಪ್ರಥಮ ದರ್ಜೆ ಕಾಲೇಜಿನಲ್ಲಿ ಮ್ಯೂಚುವಲ್ ಫಂಡ್ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya

ಎಸ್.ಡಿ.ಎಂ. ಡಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ, ವಿಷಯವಾರು ಸಂಘಗಳು ಮತ್ತು ಸ್ವಾಗತ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya
error: Content is protected !!