26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ಬೆಳ್ತಂಗಡಿ, ಭಾರತೀಯ ಕಥೋಲಿಕ್ ಯುವ ಸಂಚಲನ ಬೆಳ್ತಂಗಡಿ ಘಟಕ, ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನವು ಆ.18 ರಂದು ಹೋಲಿ ರಿಡೀಮರ್ ಚರ್ಚ್ ಆವರಣದಿಂದ ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ಕಾರ್ಯಕ್ರಮ ನಡೆಯಿತು.

ಈ ಅಭಿಯಾನಕ್ಕೆ ವಂದನೀಯ ಸ್ವಾಮಿ ಫಾ. ವಾಲ್ಟರ್ ಡಿ’ಮೆಲ್ಲೋ, ಹೋಲಿ ರಿಡೀಮರ್ ಸ್ಕೂಲ್ ಪ್ರಿನ್ಸಿಪಾಲ್ ರೆ. ಫಾ. ಕ್ಲಿಫರ್ಡ್ ಪಿಂಟೋ, ಪ್ಯಾರಿಷ್ ಕೌನ್ಸಿಲ್ ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೋ, ಉದ್ಯಮಿ ಪ್ರೇಮ್ ರಾಜ್ ಸಿಕ್ವೇರಾ, ಸಿಸ್ಟರ್ ಜೆಸಿಂತಾ, ಮತ್ತು ಸಹೋದರ ಅಲ್ರಿಕ್ ಚಾಲನೆ ನೀಡಿದರು.

ಐಸಿವೈಎಮ್ ಆನಿಮೇಟರ್‌ಗಳಾದ ವಿಲ್ಸನ್ ಮೋನಿಸ್, ಡಾ. ಫ್ಲಾವಿಯಾ ಪೌಲ್ ಮತ್ತು ವೈಸಿಎಸ್ ಆನಿಮೇಟರ್‌ಗಳಾದ ಜೇಮ್ಸ್ ಬಾರ್ಬೋಜಾ ಮತ್ತು ಶ್ರೀಮತಿ ಪ್ರೀತಾ ಅವರ ಮಾರ್ಗದರ್ಶನದಲ್ಲಿ, ಐಸಿವೈಎಮ್ ಅಧ್ಯಕ್ಷೆ ಅನ್ಸೆಲ್ಮಾ ಡಿಸೋಜಾ, ಐಸಿವೈಎಮ್ ಕಾರ್ಯದರ್ಶಿ ಅಜಯ್ ರೋಡ್ರಿಗಸ್, ವೈಸಿಎಸ್ ಕಾರ್ಯದರ್ಶಿ ಸ್ಟಾಲನ್ ಅವರ ನೇತೃತ್ವದಲ್ಲಿ, ಯುವಕರು ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು.

ಸುಮಾರು 30ಕ್ಕೂ ಹೆಚ್ಚಿನ ಉತ್ಸಾಹಿ ಯುವಕರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.

Related posts

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಜನ್ಮದಿನಾಚರಣೆ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ರವರಿಗೆ ಗೌರವ ಸಮರ್ಪಣೆ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾ ಪ್ರಕರಣ: ದ.ಕ. ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ

Suddi Udaya

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya
error: Content is protected !!