ಹೊಸಂಗಡಿ ವಲಯದ ಗುಂಡೂರಿ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ

Suddi Udaya

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಹೊಸಂಗಡಿ ವಲಯದ ಗುಂಡೂರಿ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ಸಂಗೀತ ರವರ ಉಪಸ್ಥಿತಿಯಲ್ಲಿ ನಡೆಯಿತು.

ಡಾ.ಮಧುಮಾಲ ಕೆ ಆಳ್ವಾಸ್ ಕಾಲೇಜು ಸಮಾಜ ಕಾರ್ಯ ಮುಖ್ಯಸ್ಥರು ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ, ಹಾಗೂ ಮಕ್ಕಳ ಕಾರ್ಯ ಚಟುವಟಿಕೆಯ ಬಗ್ಗೆ ಗಮನಹರಿಸಿ ಉತ್ತಮ ಸಮಾಜ ರೂಪಿಸುವಲ್ಲಿ ಮಹಿಳೆಯರಾದ ನಮ್ಮೆಲ್ಲರಿಗೂ ಜವಾಬ್ದಾರಿ ಇದೆ ಎಂದು ಉಪನ್ಯಾಸ ನೀಡಿದರು ಹಾಗೂ ಪ್ರಾದೇಶಿಕ ನಿರ್ದೇಶಕರಾದ ಗಣೇಶ್ ಬಿ ಯವರು ವರಮಹಾಲಕ್ಷ್ಮಿ ಪೂಜೆಯ ಮಹತ್ವ ಹಾಗೂ ಆಚರಣೆ ಹಾಗೂ ಕುಟುಂಬದಲ್ಲಿ ಮಹಿಳೆಯರ ಪಾತ್ರದ ಬಗ್ಗೆ ತಿಳಿಸಿದರು ಹಾಗೂ ಕಾರ್ಯಕ್ರಮದಲ್ಲಿ ರಮೇಶ್ ಪೂಜಾರಿ, ಪಂಚಾಯತ್ ಅಧ್ಯಕ್ಷರಾದ, ಲಯನ್ ಅಧ್ಯಕ್ಷರಾದ ಹರೀಶ್ ಕುಮಾರ್ ಪೊಕ್ಕಿ, ಕುಮಾರ್ ಹೆಗ್ಡೆ, ಪ್ರಗತಿ ಬಂದು ಒಕ್ಕೂಟ ಅಧ್ಯಕ್ಷರಾದ ಸದಾನಂದ ಪೂಜಾರಿ ಹಾಗೂ ಪೂಜಾ ಸಮಿತಿ ಗೌರವ ಅಧ್ಯಕ್ಷರಾದ ಉಷಾರವರು ಉಪಸ್ಥಿತರಿದ್ದರು.

Leave a Comment

error: Content is protected !!