24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಅಳದಂಗಡಿ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕುದ್ಯಾಡಿ ಜನಜಾಗೃತಿ ಗ್ರಾಮ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಪದಗ್ರಹಣ ಸಮಾರಂಭವು ಕುದ್ಯಾಡಿ ಶಾಲಾ ವಠಾರದಲ್ಲಿ ಆ. 18 ರಂದು ಜರಗಿತು.


ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ವಿಶ್ವನಾಥ ಪೂಜಾರಿ ಕುದ್ಯಾಡಿ ಗುತ್ತು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಸಭೆಯ ಅಧ್ಯಕ್ಷರಾದ ಶ್ರೀಮತಿ ತಾರಾ, ಅಳದಂಗಡಿ ಯೋಜನಾ ಮೇಲ್ವಿಚಾರಕರು ಸುಮಂಗಲ., ಸದ್ಧರ್ಮ ಯುವಕ ಮಂಡಲ ಅಧ್ಯಕ್ಷ ಸದಾನಂದ ಪೂಜಾರಿ, ಗ್ರಾಮ ಪಂಚಾಯಿತಿ ಸದಸ್ಯರಾದ ಯಶೋಧ ಎಲ್ ಬಂಗೇರ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಂತಿ ಸಿ ಪೂಜಾರಿ, ನವ ಜೀವನ ಸಮಿತಿ ಅಧ್ಯಕ್ಷರಾದ ಪ್ರವೀಣ್ ಪೂಜಾರಿ, ಒಕ್ಕೂಟದ ಉಪಾಧ್ಯಕ್ಷ ರಾಮಪ್ಪ ಕುಲೆಚ್ಚಾವು, ಒಕ್ಕೂಟ ಕಾರ್ಯದರ್ಶಿಯಾದ ಪೂರ್ಣಿಮಾ, ಜೊತೆ ಕಾರ್ಯದರ್ಶಿಗಳಾದ ಜನಿತ ಶೆಟ್ಟಿ ಉಪಸ್ಥಿತರಿದ್ದರು.


ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರು ಪದಾಧಿಕಾರಿಗಳಿಗೆ ಪುಸ್ತಕ ಹಸ್ತಾಂತರ ಮಾಡಲಾಯಿತು.
ಕುದ್ಯಾಡಿ ಒಕ್ಕೂಟದಲ್ಲಿ ಪ್ರಾರಂಭಿಸುವಾಗ ಇರುವಂತ ನಾಲ್ಕು ಮಂದಿ ಹಿರಿಯರನ್ನು ಗೌರವಿಸಲಾಯಿತು.
ಮೂರು ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಇಬ್ಬರು ನವಜೀವನ ಸಮಿತಿಯ ಫಲಾನುಭವಿಗಳನ್ನು ಸನ್ಮಾನಿಸಲಾಯಿತು.
ಪೂರ್ಣಿಮಾ ದರ್ಕಾಸು ಪ್ರಾರ್ಥನೆ ಮಾಡಿದರು. ಸೇವಾ ಪ್ರತಿನಿಧಿಯಾದ ಮಮತಾ ಶುಭಕರ ಪೂಜಾರಿ ವರದಿ ವಾಚಿಸಿದರು. ಶುಭಾಕರ ಪೂಜಾರಿ ಸ್ವಾಗತಿಸಿದರು. ದಿನೇಶ್ ಬಿರ್ಮಜರಿ ಧನ್ಯವಾದವಿತ್ತರು.

Related posts

ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ಅಧಿಕಾರ ಸ್ವೀಕಾರ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ರಾಜ್ಯಮಟ್ಟದ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಚಾಂಪಿಯನ್ಸ್

Suddi Udaya

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!