22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಅಳದಂಗಡಿ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕುದ್ಯಾಡಿ ಜನಜಾಗೃತಿ ಗ್ರಾಮ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಪದಗ್ರಹಣ ಸಮಾರಂಭವು ಕುದ್ಯಾಡಿ ಶಾಲಾ ವಠಾರದಲ್ಲಿ ಆ. 18 ರಂದು ಜರಗಿತು.


ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ವಿಶ್ವನಾಥ ಪೂಜಾರಿ ಕುದ್ಯಾಡಿ ಗುತ್ತು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಸಭೆಯ ಅಧ್ಯಕ್ಷರಾದ ಶ್ರೀಮತಿ ತಾರಾ, ಅಳದಂಗಡಿ ಯೋಜನಾ ಮೇಲ್ವಿಚಾರಕರು ಸುಮಂಗಲ., ಸದ್ಧರ್ಮ ಯುವಕ ಮಂಡಲ ಅಧ್ಯಕ್ಷ ಸದಾನಂದ ಪೂಜಾರಿ, ಗ್ರಾಮ ಪಂಚಾಯಿತಿ ಸದಸ್ಯರಾದ ಯಶೋಧ ಎಲ್ ಬಂಗೇರ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಂತಿ ಸಿ ಪೂಜಾರಿ, ನವ ಜೀವನ ಸಮಿತಿ ಅಧ್ಯಕ್ಷರಾದ ಪ್ರವೀಣ್ ಪೂಜಾರಿ, ಒಕ್ಕೂಟದ ಉಪಾಧ್ಯಕ್ಷ ರಾಮಪ್ಪ ಕುಲೆಚ್ಚಾವು, ಒಕ್ಕೂಟ ಕಾರ್ಯದರ್ಶಿಯಾದ ಪೂರ್ಣಿಮಾ, ಜೊತೆ ಕಾರ್ಯದರ್ಶಿಗಳಾದ ಜನಿತ ಶೆಟ್ಟಿ ಉಪಸ್ಥಿತರಿದ್ದರು.


ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರು ಪದಾಧಿಕಾರಿಗಳಿಗೆ ಪುಸ್ತಕ ಹಸ್ತಾಂತರ ಮಾಡಲಾಯಿತು.
ಕುದ್ಯಾಡಿ ಒಕ್ಕೂಟದಲ್ಲಿ ಪ್ರಾರಂಭಿಸುವಾಗ ಇರುವಂತ ನಾಲ್ಕು ಮಂದಿ ಹಿರಿಯರನ್ನು ಗೌರವಿಸಲಾಯಿತು.
ಮೂರು ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಇಬ್ಬರು ನವಜೀವನ ಸಮಿತಿಯ ಫಲಾನುಭವಿಗಳನ್ನು ಸನ್ಮಾನಿಸಲಾಯಿತು.
ಪೂರ್ಣಿಮಾ ದರ್ಕಾಸು ಪ್ರಾರ್ಥನೆ ಮಾಡಿದರು. ಸೇವಾ ಪ್ರತಿನಿಧಿಯಾದ ಮಮತಾ ಶುಭಕರ ಪೂಜಾರಿ ವರದಿ ವಾಚಿಸಿದರು. ಶುಭಾಕರ ಪೂಜಾರಿ ಸ್ವಾಗತಿಸಿದರು. ದಿನೇಶ್ ಬಿರ್ಮಜರಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ಕಣಿಯೂರು ಗ್ರಾಮಪಂಚಾಯತ್ ಮಟ್ಟದ ಜನಸ್ಪಂದನ ಸಭೆ

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya
error: Content is protected !!