September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಅಳದಂಗಡಿ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕುದ್ಯಾಡಿ ಜನಜಾಗೃತಿ ಗ್ರಾಮ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಪದಗ್ರಹಣ ಸಮಾರಂಭವು ಕುದ್ಯಾಡಿ ಶಾಲಾ ವಠಾರದಲ್ಲಿ ಆ. 18 ರಂದು ಜರಗಿತು.


ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ವಿಶ್ವನಾಥ ಪೂಜಾರಿ ಕುದ್ಯಾಡಿ ಗುತ್ತು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಸಭೆಯ ಅಧ್ಯಕ್ಷರಾದ ಶ್ರೀಮತಿ ತಾರಾ, ಅಳದಂಗಡಿ ಯೋಜನಾ ಮೇಲ್ವಿಚಾರಕರು ಸುಮಂಗಲ., ಸದ್ಧರ್ಮ ಯುವಕ ಮಂಡಲ ಅಧ್ಯಕ್ಷ ಸದಾನಂದ ಪೂಜಾರಿ, ಗ್ರಾಮ ಪಂಚಾಯಿತಿ ಸದಸ್ಯರಾದ ಯಶೋಧ ಎಲ್ ಬಂಗೇರ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಂತಿ ಸಿ ಪೂಜಾರಿ, ನವ ಜೀವನ ಸಮಿತಿ ಅಧ್ಯಕ್ಷರಾದ ಪ್ರವೀಣ್ ಪೂಜಾರಿ, ಒಕ್ಕೂಟದ ಉಪಾಧ್ಯಕ್ಷ ರಾಮಪ್ಪ ಕುಲೆಚ್ಚಾವು, ಒಕ್ಕೂಟ ಕಾರ್ಯದರ್ಶಿಯಾದ ಪೂರ್ಣಿಮಾ, ಜೊತೆ ಕಾರ್ಯದರ್ಶಿಗಳಾದ ಜನಿತ ಶೆಟ್ಟಿ ಉಪಸ್ಥಿತರಿದ್ದರು.


ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರು ಪದಾಧಿಕಾರಿಗಳಿಗೆ ಪುಸ್ತಕ ಹಸ್ತಾಂತರ ಮಾಡಲಾಯಿತು.
ಕುದ್ಯಾಡಿ ಒಕ್ಕೂಟದಲ್ಲಿ ಪ್ರಾರಂಭಿಸುವಾಗ ಇರುವಂತ ನಾಲ್ಕು ಮಂದಿ ಹಿರಿಯರನ್ನು ಗೌರವಿಸಲಾಯಿತು.
ಮೂರು ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಇಬ್ಬರು ನವಜೀವನ ಸಮಿತಿಯ ಫಲಾನುಭವಿಗಳನ್ನು ಸನ್ಮಾನಿಸಲಾಯಿತು.
ಪೂರ್ಣಿಮಾ ದರ್ಕಾಸು ಪ್ರಾರ್ಥನೆ ಮಾಡಿದರು. ಸೇವಾ ಪ್ರತಿನಿಧಿಯಾದ ಮಮತಾ ಶುಭಕರ ಪೂಜಾರಿ ವರದಿ ವಾಚಿಸಿದರು. ಶುಭಾಕರ ಪೂಜಾರಿ ಸ್ವಾಗತಿಸಿದರು. ದಿನೇಶ್ ಬಿರ್ಮಜರಿ ಧನ್ಯವಾದವಿತ್ತರು.

Related posts

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya
error: Content is protected !!