28.8 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

ಉಜಿರೆ :ಆ19, “ಸಂಸ್ಕೃತ ಭಾಷೆ ಎಲ್ಲ ಭಾಷೆಗಳ ಜನನಿ. ಭಾರತದ ಪ್ರತಿಷ್ಠೆ ಎರಡು. ಮೊದಲನೆಯದು ಸಂಸ್ಕೃತಿ, ಎರಡನೆಯದು ಸಂಸ್ಕೃತ.” ಎಂದು ಸಂಸ್ಕೃತ ವಿದ್ವಾಂಸರು ಹಾಗೂ ಜೋತಿಷ್ಯರು ಆಗಿರುವ ಡಾ.ಯತೀಶ್ ಪೊದುವಾಳ್ ಇವರು ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ‘ಆತ್ಮಾನಂ ಸಂಸ್ಕೃತಂ ಮನ್ಯೆ’ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿದ್ದ ‘ಸಂಸ್ಕೃತೋತ್ಸವ’ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಕೃತ ಜಯ ಘೋಷಗಳೊಂದಿಗೆ ಮೆರವಣಿ, ಸಂಸ್ಕೃತ ವಸ್ತು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಶಾಲಾ ಶೈಕ್ಷಣಿಕ ಸಂಯೋಜಕಿ ಶಿಕ್ಷಕಿ ಸುಮಾ ಶ್ರೀನಾತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿಯರಾದ ಇನಿಕ ಮತ್ತು ಹರ್ಷಿಣಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಆಶುತೋಷ್ ಹಾಗೂ ದೀಪ್ತಿ ಜೈನ್ ಸ್ವಾಗತಿಸಿ, ಕಾರ್ಯಕ್ರಮದ ಸಂಯೋಜಕಿ ಶಿಕ್ಷಕಿ ಸುಜನ ವಲ್ತಾಜೆ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ಜಮಾಬಂದಿ: ವಿವಿಧ ಯೋಜನೆಗಳಲ್ಲಿ ಶೇ 98.07 – 15ನೇ ಹಣಕಾಸು ಯೋಜನೆಯಲ್ಲಿ ಶೇ 67.14 ಪ್ರಗತಿ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ: ಕಳೆದ 19 ವರ್ಷಗಳಿಂದ ಉತ್ತಮ‌ ಸೇವೆಗೆ ಹೆಸರುವಾಸಿಯಾದ ಆಸ್ಪತ್ರೆ

Suddi Udaya

ಲೋಕಸಭಾ ಚುನಾವಣಾ ನೀತಿ ಸಂಹಿತೆ: ಗ್ರಾ.ಪಂ. ನೌಕರರ ಶಾಂತಿಯುತ ಪ್ರತಿಭಟನೆ ಮುಕ್ತಾಯ: ಆ.20 ರಿಂದ ಬೆಂಗಳೂರು ವಿಧಾನಸೌಧ ಮುಂಭಾಗ ಬೃಹತ್ ಪ್ರತಿಭಟನೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya
error: Content is protected !!