27.3 C
ಪುತ್ತೂರು, ಬೆಳ್ತಂಗಡಿ
May 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

ಉಜಿರೆ :ಆ19, “ಸಂಸ್ಕೃತ ಭಾಷೆ ಎಲ್ಲ ಭಾಷೆಗಳ ಜನನಿ. ಭಾರತದ ಪ್ರತಿಷ್ಠೆ ಎರಡು. ಮೊದಲನೆಯದು ಸಂಸ್ಕೃತಿ, ಎರಡನೆಯದು ಸಂಸ್ಕೃತ.” ಎಂದು ಸಂಸ್ಕೃತ ವಿದ್ವಾಂಸರು ಹಾಗೂ ಜೋತಿಷ್ಯರು ಆಗಿರುವ ಡಾ.ಯತೀಶ್ ಪೊದುವಾಳ್ ಇವರು ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ‘ಆತ್ಮಾನಂ ಸಂಸ್ಕೃತಂ ಮನ್ಯೆ’ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿದ್ದ ‘ಸಂಸ್ಕೃತೋತ್ಸವ’ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಕೃತ ಜಯ ಘೋಷಗಳೊಂದಿಗೆ ಮೆರವಣಿ, ಸಂಸ್ಕೃತ ವಸ್ತು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಶಾಲಾ ಶೈಕ್ಷಣಿಕ ಸಂಯೋಜಕಿ ಶಿಕ್ಷಕಿ ಸುಮಾ ಶ್ರೀನಾತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿಯರಾದ ಇನಿಕ ಮತ್ತು ಹರ್ಷಿಣಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಆಶುತೋಷ್ ಹಾಗೂ ದೀಪ್ತಿ ಜೈನ್ ಸ್ವಾಗತಿಸಿ, ಕಾರ್ಯಕ್ರಮದ ಸಂಯೋಜಕಿ ಶಿಕ್ಷಕಿ ಸುಜನ ವಲ್ತಾಜೆ ವಂದಿಸಿದರು.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya

ಮರದಿಂದ ಬಿದ್ದು ಸಾವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ

Suddi Udaya

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya
error: Content is protected !!