25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ರಾಜ್ಯ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ಮೈಸೂರು ಜಿಲ್ಲಾ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸ್ಪರ್ಧೆಯಲ್ಲಿ ಎಸ್ ಡಿ ಎಮ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

ಉಜಿರೆ: ಕರ್ನಾಟಕ ರಾಜ್ಯ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸಂಸ್ಥೆ(ರಿ.) ಹಾಗೂ ಮೈಸೂರು ಜಿಲ್ಲಾ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸಂಸ್ಥೆ ಸಹಯೋಗದಲ್ಲಿ ಮಹಜನ ಪ್ರಥಮ ದರ್ಜೆ ಕಾಲೇಜು, ಮೈಸೂರು ಇಲ್ಲಿ ಆ. 10, 11ರಂದು ಜರಗಿದ ಪುರುಷರ ಮತ್ತು ಮಹಿಳಾ ರಾಜ್ಯ ಯೂತ್ ಜೂನಿಯರ್ ಮತ್ತು ಸೀನಿಯರ್ ವೆಯಿಟ್ ಲಿಫ್ಟಿಂಗ್ ಚಾಂಪಿಯನ್ಶಿಪ್ ನಲ್ಲಿ ಎಸ್ ಡಿ ಎಮ್ ಕಾಲೇಜಿನ ತಂಡವು ಹಲವು ಪ್ರಶಸ್ತಿಯನ್ನು ಪಡೆಯಿತು.


ಬಾಲಕರ ಮೂರು ವಿಭಾಗದಲ್ಲಿ ಹಾಗೂ ಬಾಲಕಿಯರ ಮೂರು ವಿಭಾಗದಲ್ಲಿ, ಒಟ್ಟು ಆರು ತಂಡವು ಭಾಗವಹಿಸಿದೆ.

ಸೀನಿಯರ್ ಬಾಲಕರ ವಿಭಾಗ: ಮನೋಜ್- 55 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ, ಸುಬ್ರಮಣ್ಯ – 61 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ, ಪ್ರಜ್ವಲ್- 73 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ, ಕವನ್- 67 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ, ರಜತ್ ರೈ- 81 ಕೆ.ಜಿ ಚಿನ್ನದ ಪದಕ, ಶರತ್ -81 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ, ಅಭಿರಾಮ್ ಚಂದ್ರ- 89 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ, ಹರ್ಷಿತ್ 109 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ.

ಯೂತ್ ಬಾಲಕರ ವಿಭಾಗ – ಪವನ್ .ಕೆ -73 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ, ಸಮರ್ಥ- 96 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.
ಜೂನಿಯರ್ ಬಾಲಕರ ವಿಭಾಗ– ಸಮರ್ಥ್ 96 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ, ನಿತೇಶ್- 73 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ, ಪವನ್ -73 ಕೆ.ಜಿ ವಿಭಾಗದಲ್ಲಿ ನಾಲ್ಕನೇ ಸ್ಥಾನ, ರಿತಿಕ್- 89 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ, ಮನೋಜ್ -96 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ, ಹರ್ಷಿತ್- 109 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ.

ಸೀನಿಯರ್ ಬಾಲಕಿಯರ ವಿಭಾಗ:
ಸ್ವಪ್ನ -59 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ, ಸಾನಿಕ- 64 ಕೆಜಿ ವಿಭಾಗದಲ್ಲಿ ಕಂಚಿನ ಪದಕ, ಸಂಗೀತ -71 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ, ತೇಜಸ್ವಿನಿ 81 ಕೆಜಿ ವಿಭಾಗದಲ್ಲಿ ಚಿನ್ನದ ಪದಕ, ಅಮೃತ- 49 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ.

ಯೂತ್ ಬಾಲಕಿಯರ ವಿಭಾಗ: ಅಮೃತ 49 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ, 64 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ.

ಜೂನಿಯರ್ ಬಾಲಕಿಯರ ವಿಭಾಗ:
ಅಮೃತ 49ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ, ಸ್ವಪ್ನ -59 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ, 64 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ, ಸಂಗೀತ- 71 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ, ತೇಜಸ್ವಿನಿ -81 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ.

ಇವರಿಗೆ ಸಂತೋಷ್ ಕುಮಾರ್ ಇವರು ತರಬೇತಿಯನ್ನು ನೀಡಿರುತ್ತಾರೆ ಹಾಗೂ ಎಸ್ ಡಿ ಎಂ ಕಾಲೇಜಿನ ಕ್ರೀಡಾ ಕಾರ್ಯದರ್ಶಿಯಾದ ರಮೇಶ್ .ಹೆಚ್ ಇವರು ಸಾಧನೆಯನ್ನು ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಬಜಿರೆ‌ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಮಾಡಿದ ಆರೋಪ: ಐವರ ಮೇಲೆ ಪ್ರಕರಣ: ಓವ೯ರ ಬಂಧನ

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya
error: Content is protected !!