July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆಯ ಸಭೆಯು ನಾರಾವಿ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ಆ.18 ರಂದು ನಡೆಯಿತು.

ಮೇಲ್ವಿಚಾರಕರಾದ ದಮಯಂತಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ವಲಯದಲ್ಲಿ ಒಟ್ಟು 15 ಭಜನಾ ಮಂಡಳಿಗಳಿದ್ದು ಇದರಲ್ಲಿ ಒಬ್ಬರು ಸಂಚಾಲಕರು ಹಾಗೂ 5 ಮಂದಿ ಪದಾಧಿಕಾರಿಗಳ ಅಯ್ಕೆ ಮಾಡುವ ಬಗ್ಗೆ ತಿಳಿಸಿದರು. ನಂತರ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸಂಚಾಲಕರಾಗಿ ಸಂತೋಷ್ ಮರ್ದೋಟ್ಟು, ಅಧ್ಯಕ್ಷರಾಗಿ ರಾಜು ಪೂಜಾರಿ, ಉಪಾಧ್ಯಕ್ಷರಾಗಿ ಸುಧಾಕರ, ಕಾರ್ಯದರ್ಶಿ ಹರೀಶ್ ಯನ್, ಜತೆ ಕಾರ್ಯದರ್ಶಿ ಅಕ್ಷಯ್, ಕೋಶಾಧಿಕಾರಿಯಾಗಿ ಚಂದ್ರ ಶೇಖರ ರಾವ್ , ಹಾಗೂ ಯೋಗೀಶ್ ಆಚಾರ್ಯ, ಇವರನ್ನು ಭಜನಾ ಮಂಡಳಿಯ ಸದಸ್ಯರ ಉಪಸ್ಥಿತಿಯಲ್ಲಿ ಆಯ್ಕೆ ಮಾಡಲಾಯಿತು. ನಾರಾವಿ ಸೇವಾ ಪ್ರತಿನಿಧಿ ರೇಷ್ಮಾ ಉಪಸ್ಥಿತರಿದ್ದರು.

ಸೇವಾ ಪ್ರತಿನಿಧಿ ಹರಿಣಾಕ್ಷಿ ಸ್ವಾಗತಿಸಿದರು. ಸಭೆಯ ಕೊನೆಗೆ ಕೊಕ್ರಾಡಿ ಸಾವ್ಯ ಸೇವಾಪ್ರತಿನಿಧಿ ಶಶಿಧರ್ ಕುಲಾಲ್ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

Suddi Udaya

ಮುಂಡಾಜೆಯ ತಿರುವಿನ ಬಳಿ ಮೋರಿಗೆ ಜಾರಿದ ಕಾರು

Suddi Udaya

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya

ಕ್ರೇನ್ – ಸ್ಕೂಟರ್ ಅಪಘಾತ:ಸ್ಕೂಟರ್ ಸವಾರ ದುರ್ಮರಣ

Suddi Udaya
error: Content is protected !!