27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 6.74 ಲಕ್ಷ ಲಾಭ, ಶೇ.20 ಡಿವಿಡೆಂಟ್

ಬಳಂಜ: ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ 2023-24 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಶ್ರೀಮತಿ ಪುಷ್ಪಾರವರ ಅಧ್ಯಕ್ಷತೆಯಲ್ಲಿ ಆ.17 ರಂದು ಭಾಗಿ ಮುಂಡಪ್ಪ ಪೂಜಾರಿ ಸಭಾ ವೇದಿಕೆಯಲ್ಲಿ ಜರುಗಿತು.

ಸಂಘವು ರೂ.6.74 ಲಕ್ಷ ಲಾಭಗಳಿಸಿದ್ದು, ಸದಸ್ಯರಿಗೆ ಶೇ.65 ಬೋನಸ್ ಹಾಗೂ ಶೇ.20 ಡಿವಿಡೆಂಟ್ ನೀಡಲಾಗುವುದು.

ದ.ಕ ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಡಾ. ಸತೀಶ್ ರಾವ್ ಹಾಗೂ ವಿಸ್ತರಣಾಧಿಕಾರಿ ಸುಚಿತ್ರಾ ರವರು ಸಭೆಯಲ್ಲಿ ಸದಸ್ಯರಿಗೆ ಹೈನುಗಾರಿಕಾ ಮಾಹಿತಿಯನ್ನು ನೀಡಿದರು. ಉಪಾಧ್ಯಕ್ಷೆ ಮಾಲಿನಿ , ಶಾಂಭವಿ, ಅರುಣಾ ನಿರುಪಮಾ, ಉಷಾ, ಜಯಂತಿ, ಶೋಭಾ, ಯಶೋಧಾ, ಬೇಬಿ, ಉಪಸ್ಥಿತರಿದ್ದರು.

ಮುಖ್ಯ ನಿರ್ವಹಣಾಧಿಕಾರಿ ಭಾರತಿ ವರದಿ ಮತ್ತು ಲೆಕ್ಕ ಪತ್ರಗಳನ್ನು ಮಂಡಿಸಿದರು. ಸಂಘದ ಹಿರಿಯ ಹೈನುಗಾರರು , ನಿರ್ದೇಶಕರು ಆದ ಯಶೋದ ರವರನ್ನು ಸನ್ಮಾನಿಸಲಾಯಿತು. ಸಂಘಕ್ಕೆ ಅತೀ ಹೆಚ್ಚು ಹಾಲು ಹಾಕಿ ಪ್ರಥಮ ಸ್ಥಾನ ಪಡೆದ ಪ್ರಮೀಳಾ, ದ್ವಿತೀಯ ನಂದಿನಿ, ತೃತೀಯ ಮಾಲಿನಿ ಹಾಗೂ 9 ಜನ ಅತೀ ಹೆಚ್ಚು ಹಾಕಿದ ಗುಣವತಿ , ಮುಕ್ತಾ, ಅರುಣ ಹೆಗ್ಡೆ, ಹರ್ಷಿಣಿ, ಸುಖಾರೈ, ಜಯಶ್ರೀ, ಪುಷ್ಪಾ, ಹರ್ಷಲತಾ, ಉಷಾ ಇವರನ್ನು ಸಭೆಯಲ್ಲಿ ಗುರುತಿಸಲಾಯಿತು. ಎಸ್.ಎಸ್.ಎಲ್.ಸಿ ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಮನ್ವಿತಾ ಹಾಗೂ ರಕ್ಷಿತ್ ಗೆ ವಿದ್ಯಾರ್ಥಿ ವೇತನ ನೀಡಲಾಯಿತು.

ನಿರ್ದೇಶಕರಾದ ನಿರುಪಮಾ ಸ್ವಾಗತಿಸಿ, ಸದಸ್ಯೆ ನಂದಿನಿ ನಿರೂಪಿಸಿದರು. ಉಪಾಧ್ಯಕ್ಷೆ ಮಾಲಿನಿ ವಂದಿಸಿದರು. ಸಭೆಯಲ್ಲಿ ಸಂಘಕ್ಕೆ ಸ್ಥಳ ದಾನ ,ಮಾಡಿದಂತಹ ಹೆಚ್. ಧರ್ಣಪ್ಪ ಪೂಜಾರಿ ಯವರು ಉಪಸ್ಥಿತರಿದ್ದರು. ಸಿಬ್ಬಂದಿಗಳಾದ ಸುರೇಶ್ ಪೂಜಾರಿ ಜೈಮಾತಾ ಹಾಗೂ ರೇಶ್ಮಾ ಸಹಕರಿಸಿದರು.

Related posts

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!