24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ : ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಂಗ ಸಂಸ್ಥೆಯಾದ ರೋಟರಿ ಆನ್ಸ್ ಕ್ಲಬ್ ಇದರ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ ಆ. 15 ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಂಗಣದಲ್ಲಿ ನಡೆಯಿತು.


ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಅಧಿಕಾರ ಸ್ವೀಕರಿಸಿದರೆ, ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅವರು ಅಧಿಕಾರ ಸ್ವೀಕರಿಸಿದರು.

ಕಾರ್ಯಕ್ರಮದ ಅಧ್ಯಕ್ಷರಾಗಿ ರೊ ಪೂರನ್ ವರ್ಮ ಬಂದಂತಹ ಅತಿಥಿಗಳನ್ನು ಸ್ವಾಗತಿಸಿದರು .ಪದ ಪ್ರಧಾನ ಅಧಿಕಾರಿಯಾಗಿ ರೊ ಸೋನಿಯಾವರ್ಮ ನೂತನ ಪದಾಧಿಕಾರಿಗಳಿಗೆ ಅಧಿಕಾರ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ಯಾಗಿ ಮೂಡಬಿದ್ರೆಯ ನೋಟರಿ ವಕೀಲರಾದ ಶ್ರೀಮತಿ ಶ್ವೇತ ಜೈನ್ ಅವರು ಮಾತನಾಡಿ ಮಹಿಳೆಯರು ತಮ್ಮಲ್ಲಿ ನಾಯಕತ್ವ ಗುಣ ಹಾಗೂ ಸಮಾಜ ಸೇವೆ ಮಾಡುವಂತಹ ಮನೋಸ್ಥಿತಿ ಬೆಳೆಸಿಕೊಳ್ಳಬೇಕು ಎಂದರು.
ನಿರ್ಗಮನ ಅಧ್ಯಕ್ಷರಾದ ಡಾ.ಅನಿತಾ ದಯಾಕರ್ ಅವರು ತಮ್ಮ ಮನದಾಳದ ಮಾತನ್ನು ಆಡಿದರು.
ನೂತನ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ ಶ್ರೀಧರ್ ಅವರು ಮಾತನಾಡಿ ಆನ್ಸ್ ಕ್ಕಬ್ ನ ಅಧ್ಯಕ್ಷೆಯಾಗಿ ತನ್ನನ್ನು ಆಯ್ಕೆ ಮಾಡಿದ ರೋಟರಿ ಕ್ಲಬ್ ನ ಪದಾಧಿಕಾರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಇತರ ಸ್ಥಾನಗಳಿಗೆ ಆಯ್ಕೆಯಾದ ಪದಾಧಿಕಾರಿಗಳು ತಮ್ಮ ಅಧಿಕಾರ ಸ್ವೀಕರಿಸಿದರು ಹಾಗೂ ಕಳೆದ ಹದಿಮೂರು ವರ್ಷಗಳಲ್ಲಿ ಆನ್ಸ್ ಕ್ಲಬ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಸದಸ್ಯೆಯರನ್ನು ಅಭಿನಂದಿಸಲಾಯಿತು.

ಈ ಸಂಧರ್ಭದಲ್ಲಿ 2024 ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆಯಾಗಿರುವ ಡಿ.ಆರ್.ಎಫ್.ಓ ಕಮಲ ಹಾಗೂ ಯುವ ಪ್ರತಿಭಾನ್ವಿತ ಕಲಾವಿದೆ ಕುಮಾರಿ ಸಿಂಚನಾ ಅವರನ್ನು ಗೌರವಿಸಲಾಯಿತು ಹಾಗೂ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿನಿಯೋರ್ವಳಿಗೆ ವಿಧ್ಯಾರ್ಥಿ ವೇತನವನ್ನು ನೀಡಲಾಯಿತು. ವೇದಿಕೆಯಲ್ಲಿ ರೋಟರಿ ಕ್ಲಬ್ ನ ಕಾರ್ಯದರ್ಶಿ ಸಂದೇಶ್ ರಾವ್ ಉಪಸ್ಥಿತರಿದ್ದರು

ಕಾರ್ಯಕ್ರಮವು ಕುಮಾರಿ ಇಂಚರಾ ಕಾರಂತ್ ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಶ್ರೀಮತಿ ರಶ್ಮಿ ಪಟವರ್ಧನ್ ಹಾಗೂ ಶ್ರೀಮತಿ ವೈಷ್ಣವಿ‌ ಪ್ರಭು ಅವರು ಕಾರ್ಯಕ್ರಮವನ್ನು ನಿರೂಪಿಸಿದರೆ ಸುಜಾತ ಅಣ್ಣಿ ಪೂಜಾರಿ, ದೀಪ್ತಿ ಹೆಗ್ಡೆ , ಸ್ಮಿತಾ ಪ್ರಶಾಂತ್ ಜೈನ್, ಮಮತಾ ಶ್ರೀನಾಥ್, ಶೋಭಾ ಗೋಪಾಲಕೃಷ್ಣ, ರಶ್ಮಿ ಆದರ್ಶ್ ಕಾರಂತ್ ಅವರು ಸಹಕರಿಸಿದರು. ನೂತನ ಕಾರ್ಯದರ್ಶಿ ಡಾ. ವಿನಯಾ ಕಿಶೋರ್ ಅವರು ವಂದಿಸಿದರು.

Related posts

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

Suddi Udaya

ಉಜಿರೆ: ಶ್ರೀ. ಧ. ಮಂ. ಪ.ಪೂ. ಕಾಲೇಜಿನ ಸಂಸ್ಕೃತ ವಿಭಾಗದ ” ಸುಬೋಧಿನಿ ” ಡಿಜಿಟಲ್ ಭಿತ್ತಿಪತ್ರಿಕೆ ಬಿಡುಗಡೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

Suddi Udaya

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

Suddi Udaya
error: Content is protected !!