23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ  ಆ.17 ರಂದು ನಡೆಯಿತು.
ಚೆಸ್ ಪಂದ್ಯಾಟವನ್ನು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಭುವನೇಶ್ ಉದ್ಘಾಟಿಸಿದರು. ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ತಾರಾ ಕೇಸರಿ, ಸ್ವಾಗತಿಸಿದರು.
ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಸುಜಯ, ತಾಲೂಕು ಶಿಕ್ಷಣ ಸಂಯೋಜಕಿ ಚೇತನಾಕ್ಷಿ, ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ನ ಕಾರ್ಯದರ್ಶಿಗಳಾದ ರಮೇಶ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೆಳ್ತಂಗಡಿಯ ಅಧ್ಯಕ್ಷ ಕೃಷ್ಣಾನಂದ ರಾವ್, ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ  ಅಧ್ಯಕ್ಷ ರವಿರಾಜ್ ಗೌಡ ಹಾಗೂ ಉಪಾಧ್ಯಕ್ಷ‌ ಪಂಚಾಕ್ಷರಪ್ಪ, ಎಸ್ ಡಿ ಎಂ ಬೆಳ್ತಂಗಡಿಯ ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಚೆಸ್ ಆಟಗಾರ ಶಾಬ್ದಿಕ್ ವರ್ಮಾ ಇವರನ್ನು ಸನ್ಮಾನಿಸಲಾಯಿತು.
ಗೇರುಕಟ್ಟೆ ಶಾಲೆಯ ದೈಹಿಕ ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿ, ಎಸ್ ಡಿ ಎಂ ಬೆಳ್ತಂಗಡಿಯ ಶಿಕ್ಷಕ ಶ್ರೇಯಾಂಸ್ ಜೈನ್ ವಂದಿಸಿದರು.

Related posts

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಫೆ.15: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!