ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

Suddi Udaya

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ.

ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೀಕರ ಮಳೆಯಾಗುತ್ತಿದ್ದು ತಗ್ಗು ಪ್ರದೇಶವಾದ ದಿಡುಪೆ,ಕೊಲ್ಲಿ,ಮಿತ್ತಬಾಗಿಲು ಪ್ರದೇಶದ ನದಿಗಳು ಉಕ್ಕಿ ಹರಿಯುತ್ತಿದ್ದು ನೀರಿನ ಮಟ್ಟವು ಹೆಚ್ಚಳಕ್ಕೆ ಕಾರಣವಾಗಿದೆ.

ಇದರ ಪರಿಣಾಮ ನದಿಗಳಲ್ಲಿ ತೇಲಿ ಬಂದ ಮರಗಳು ಸಿಕ್ಕಿಹಾಕಿಕೊಂಡು, ಪಕ್ಕದ ತೋಟಗಳಿಗೆ ನೀರು ನುಗ್ಗಿ ಹಾನಿಯಾಗಿದೆ.

ಈ ಭೀಕರ ಮಳೆ ಕಳೆದ 4ವರ್ಷಗಳ ಹಿಂದೆ ತಾಲೂಕಿಗೆ ಅಪ್ಪಲಿಸಿದ ನೆರೆಯನ್ನು ನೆನಪಿಸುವಂತಿದೆ.

Leave a Comment

error: Content is protected !!