22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

ನಾವರ ಗ್ರಾಮದ ದೇವರಗುಡ್ಡೆ ನಿವಾಸಿ ಹರೀಶ್ ಮೂಲ್ಯ ರವರು ಮರದ ಕಟ್ಟಿಂಗ್ ನ ಕೆಲಸ ಮಾಡುತ್ತಿರುವಾಗ ಮೆಷೀನ್ ಜಾರಿ ಅವರ ಕಾಲಿನ ಮೇಲೆ ಬಿದ್ದು ಸುಮಾರು 12 ಹೊಲಿಗೆಗಳನ್ನು ಹಾಕಿರುತ್ತಾರೆ. ಅವರ ಮಗನು ಶ್ರೀರಾಮ ಶಾಲೆ ಸುಳ್ಕೇರಿಯ ವಿದ್ಯಾರ್ಥಿಯಾಗಿದ್ದು ಅವನ ಕಾಲಿನ ಮೇಲೆ ಡೆಸ್ಕ್ ಬಿದ್ದು ಅವನು ಕೂಡ ಶಾಲೆಗೆ ಹೋಗಲಾರದೇ ಮನೆಯಲ್ಲಿಯೇ ಇದ್ದಾನೆ.. ತುಂಬಾ ಬಡತನದಲ್ಲಿರುವ ಅವರ ಕುಟುಂಬಕ್ಕೆ ಲಯನ್ಸ್ ಕ್ಲಬ್ ಬೆಳ್ತಂಗಡಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾವರ ಇವರ ವತಿಯಿಂದ 25 ಸಾವಿರ ರೂಪಾಯಿ ಯನ್ನು ಅವರ ಮನೆಗೆ ಹೋಗಿ ನೀಡಲಾಯಿತು.


ಈ ಸಂದರ್ಭ ಲಯನ್ಸ್ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಮರೋಡಿ, ನಾವರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದಂತಹ ಲಯನ್ ಪ್ರಕಾಶ್ ಶೆಟ್ಟಿ ನೊಚ್ಚ, ನಾವರ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷ ಲಯನ್ ನಿತ್ಯಾನಂದ ನಾವರ, ಆಡಳಿತ ಸಮಿತಿಯ ಸದಸ್ಯ ಲಯನ್ ರವಿ ಪೂಜಾರಿ ಹಾರಡ್ಡೆ, ಲಯನ್ ಪ್ರಶಾಂತ್ ಪೂಜಾರಿ ಹಿಮರಡ್ಡ ಉಪಸ್ಥಿತರಿದ್ದರು.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಪ್ರತಿಭಾ ಸನ್ಮಾನ

Suddi Udaya

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ರುತಿ 2k26’ ಕಾರ್ಯಕ್ರಮ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya
error: Content is protected !!