24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

ನಾವರ ಗ್ರಾಮದ ದೇವರಗುಡ್ಡೆ ನಿವಾಸಿ ಹರೀಶ್ ಮೂಲ್ಯ ರವರು ಮರದ ಕಟ್ಟಿಂಗ್ ನ ಕೆಲಸ ಮಾಡುತ್ತಿರುವಾಗ ಮೆಷೀನ್ ಜಾರಿ ಅವರ ಕಾಲಿನ ಮೇಲೆ ಬಿದ್ದು ಸುಮಾರು 12 ಹೊಲಿಗೆಗಳನ್ನು ಹಾಕಿರುತ್ತಾರೆ. ಅವರ ಮಗನು ಶ್ರೀರಾಮ ಶಾಲೆ ಸುಳ್ಕೇರಿಯ ವಿದ್ಯಾರ್ಥಿಯಾಗಿದ್ದು ಅವನ ಕಾಲಿನ ಮೇಲೆ ಡೆಸ್ಕ್ ಬಿದ್ದು ಅವನು ಕೂಡ ಶಾಲೆಗೆ ಹೋಗಲಾರದೇ ಮನೆಯಲ್ಲಿಯೇ ಇದ್ದಾನೆ.. ತುಂಬಾ ಬಡತನದಲ್ಲಿರುವ ಅವರ ಕುಟುಂಬಕ್ಕೆ ಲಯನ್ಸ್ ಕ್ಲಬ್ ಬೆಳ್ತಂಗಡಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾವರ ಇವರ ವತಿಯಿಂದ 25 ಸಾವಿರ ರೂಪಾಯಿ ಯನ್ನು ಅವರ ಮನೆಗೆ ಹೋಗಿ ನೀಡಲಾಯಿತು.


ಈ ಸಂದರ್ಭ ಲಯನ್ಸ್ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಮರೋಡಿ, ನಾವರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದಂತಹ ಲಯನ್ ಪ್ರಕಾಶ್ ಶೆಟ್ಟಿ ನೊಚ್ಚ, ನಾವರ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷ ಲಯನ್ ನಿತ್ಯಾನಂದ ನಾವರ, ಆಡಳಿತ ಸಮಿತಿಯ ಸದಸ್ಯ ಲಯನ್ ರವಿ ಪೂಜಾರಿ ಹಾರಡ್ಡೆ, ಲಯನ್ ಪ್ರಶಾಂತ್ ಪೂಜಾರಿ ಹಿಮರಡ್ಡ ಉಪಸ್ಥಿತರಿದ್ದರು.

Related posts

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ: ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ, ನವಕ ಕಲಶಾಭಿಷೇಕ

Suddi Udaya

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!