24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ಬೆಳ್ತಂಗಡಿ, ಭಾರತೀಯ ಕಥೋಲಿಕ್ ಯುವ ಸಂಚಲನ ಬೆಳ್ತಂಗಡಿ ಘಟಕ, ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನವು ಆ.18 ರಂದು ಹೋಲಿ ರಿಡೀಮರ್ ಚರ್ಚ್ ಆವರಣದಿಂದ ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ಕಾರ್ಯಕ್ರಮ ನಡೆಯಿತು.

ಈ ಅಭಿಯಾನಕ್ಕೆ ವಂದನೀಯ ಸ್ವಾಮಿ ಫಾ. ವಾಲ್ಟರ್ ಡಿ’ಮೆಲ್ಲೋ, ಹೋಲಿ ರಿಡೀಮರ್ ಸ್ಕೂಲ್ ಪ್ರಿನ್ಸಿಪಾಲ್ ರೆ. ಫಾ. ಕ್ಲಿಫರ್ಡ್ ಪಿಂಟೋ, ಪ್ಯಾರಿಷ್ ಕೌನ್ಸಿಲ್ ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೋ, ಉದ್ಯಮಿ ಪ್ರೇಮ್ ರಾಜ್ ಸಿಕ್ವೇರಾ, ಸಿಸ್ಟರ್ ಜೆಸಿಂತಾ, ಮತ್ತು ಸಹೋದರ ಅಲ್ರಿಕ್ ಚಾಲನೆ ನೀಡಿದರು.

ಐಸಿವೈಎಮ್ ಆನಿಮೇಟರ್‌ಗಳಾದ ವಿಲ್ಸನ್ ಮೋನಿಸ್, ಡಾ. ಫ್ಲಾವಿಯಾ ಪೌಲ್ ಮತ್ತು ವೈಸಿಎಸ್ ಆನಿಮೇಟರ್‌ಗಳಾದ ಜೇಮ್ಸ್ ಬಾರ್ಬೋಜಾ ಮತ್ತು ಶ್ರೀಮತಿ ಪ್ರೀತಾ ಅವರ ಮಾರ್ಗದರ್ಶನದಲ್ಲಿ, ಐಸಿವೈಎಮ್ ಅಧ್ಯಕ್ಷೆ ಅನ್ಸೆಲ್ಮಾ ಡಿಸೋಜಾ, ಐಸಿವೈಎಮ್ ಕಾರ್ಯದರ್ಶಿ ಅಜಯ್ ರೋಡ್ರಿಗಸ್, ವೈಸಿಎಸ್ ಕಾರ್ಯದರ್ಶಿ ಸ್ಟಾಲನ್ ಅವರ ನೇತೃತ್ವದಲ್ಲಿ, ಯುವಕರು ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು.

ಸುಮಾರು 30ಕ್ಕೂ ಹೆಚ್ಚಿನ ಉತ್ಸಾಹಿ ಯುವಕರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.

Related posts

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya
error: Content is protected !!