25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ಬೆಳ್ತಂಗಡಿ, ಭಾರತೀಯ ಕಥೋಲಿಕ್ ಯುವ ಸಂಚಲನ ಬೆಳ್ತಂಗಡಿ ಘಟಕ, ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನವು ಆ.18 ರಂದು ಹೋಲಿ ರಿಡೀಮರ್ ಚರ್ಚ್ ಆವರಣದಿಂದ ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ಕಾರ್ಯಕ್ರಮ ನಡೆಯಿತು.

ಈ ಅಭಿಯಾನಕ್ಕೆ ವಂದನೀಯ ಸ್ವಾಮಿ ಫಾ. ವಾಲ್ಟರ್ ಡಿ’ಮೆಲ್ಲೋ, ಹೋಲಿ ರಿಡೀಮರ್ ಸ್ಕೂಲ್ ಪ್ರಿನ್ಸಿಪಾಲ್ ರೆ. ಫಾ. ಕ್ಲಿಫರ್ಡ್ ಪಿಂಟೋ, ಪ್ಯಾರಿಷ್ ಕೌನ್ಸಿಲ್ ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೋ, ಉದ್ಯಮಿ ಪ್ರೇಮ್ ರಾಜ್ ಸಿಕ್ವೇರಾ, ಸಿಸ್ಟರ್ ಜೆಸಿಂತಾ, ಮತ್ತು ಸಹೋದರ ಅಲ್ರಿಕ್ ಚಾಲನೆ ನೀಡಿದರು.

ಐಸಿವೈಎಮ್ ಆನಿಮೇಟರ್‌ಗಳಾದ ವಿಲ್ಸನ್ ಮೋನಿಸ್, ಡಾ. ಫ್ಲಾವಿಯಾ ಪೌಲ್ ಮತ್ತು ವೈಸಿಎಸ್ ಆನಿಮೇಟರ್‌ಗಳಾದ ಜೇಮ್ಸ್ ಬಾರ್ಬೋಜಾ ಮತ್ತು ಶ್ರೀಮತಿ ಪ್ರೀತಾ ಅವರ ಮಾರ್ಗದರ್ಶನದಲ್ಲಿ, ಐಸಿವೈಎಮ್ ಅಧ್ಯಕ್ಷೆ ಅನ್ಸೆಲ್ಮಾ ಡಿಸೋಜಾ, ಐಸಿವೈಎಮ್ ಕಾರ್ಯದರ್ಶಿ ಅಜಯ್ ರೋಡ್ರಿಗಸ್, ವೈಸಿಎಸ್ ಕಾರ್ಯದರ್ಶಿ ಸ್ಟಾಲನ್ ಅವರ ನೇತೃತ್ವದಲ್ಲಿ, ಯುವಕರು ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು.

ಸುಮಾರು 30ಕ್ಕೂ ಹೆಚ್ಚಿನ ಉತ್ಸಾಹಿ ಯುವಕರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.

Related posts

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

Suddi Udaya

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya
error: Content is protected !!