ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ಬೆಳ್ತಂಗಡಿ, ಭಾರತೀಯ ಕಥೋಲಿಕ್ ಯುವ ಸಂಚಲನ ಬೆಳ್ತಂಗಡಿ ಘಟಕ, ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನವು ಆ.18 ರಂದು ಹೋಲಿ ರಿಡೀಮರ್ ಚರ್ಚ್ ಆವರಣದಿಂದ ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ಕಾರ್ಯಕ್ರಮ ನಡೆಯಿತು.

ಈ ಅಭಿಯಾನಕ್ಕೆ ವಂದನೀಯ ಸ್ವಾಮಿ ಫಾ. ವಾಲ್ಟರ್ ಡಿ’ಮೆಲ್ಲೋ, ಹೋಲಿ ರಿಡೀಮರ್ ಸ್ಕೂಲ್ ಪ್ರಿನ್ಸಿಪಾಲ್ ರೆ. ಫಾ. ಕ್ಲಿಫರ್ಡ್ ಪಿಂಟೋ, ಪ್ಯಾರಿಷ್ ಕೌನ್ಸಿಲ್ ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೋ, ಉದ್ಯಮಿ ಪ್ರೇಮ್ ರಾಜ್ ಸಿಕ್ವೇರಾ, ಸಿಸ್ಟರ್ ಜೆಸಿಂತಾ, ಮತ್ತು ಸಹೋದರ ಅಲ್ರಿಕ್ ಚಾಲನೆ ನೀಡಿದರು.

ಐಸಿವೈಎಮ್ ಆನಿಮೇಟರ್‌ಗಳಾದ ವಿಲ್ಸನ್ ಮೋನಿಸ್, ಡಾ. ಫ್ಲಾವಿಯಾ ಪೌಲ್ ಮತ್ತು ವೈಸಿಎಸ್ ಆನಿಮೇಟರ್‌ಗಳಾದ ಜೇಮ್ಸ್ ಬಾರ್ಬೋಜಾ ಮತ್ತು ಶ್ರೀಮತಿ ಪ್ರೀತಾ ಅವರ ಮಾರ್ಗದರ್ಶನದಲ್ಲಿ, ಐಸಿವೈಎಮ್ ಅಧ್ಯಕ್ಷೆ ಅನ್ಸೆಲ್ಮಾ ಡಿಸೋಜಾ, ಐಸಿವೈಎಮ್ ಕಾರ್ಯದರ್ಶಿ ಅಜಯ್ ರೋಡ್ರಿಗಸ್, ವೈಸಿಎಸ್ ಕಾರ್ಯದರ್ಶಿ ಸ್ಟಾಲನ್ ಅವರ ನೇತೃತ್ವದಲ್ಲಿ, ಯುವಕರು ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು.

ಸುಮಾರು 30ಕ್ಕೂ ಹೆಚ್ಚಿನ ಉತ್ಸಾಹಿ ಯುವಕರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.

Related posts

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!