July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ಬೆಳ್ತಂಗಡಿ, ಭಾರತೀಯ ಕಥೋಲಿಕ್ ಯುವ ಸಂಚಲನ ಬೆಳ್ತಂಗಡಿ ಘಟಕ, ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನವು ಆ.18 ರಂದು ಹೋಲಿ ರಿಡೀಮರ್ ಚರ್ಚ್ ಆವರಣದಿಂದ ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ಕಾರ್ಯಕ್ರಮ ನಡೆಯಿತು.

ಈ ಅಭಿಯಾನಕ್ಕೆ ವಂದನೀಯ ಸ್ವಾಮಿ ಫಾ. ವಾಲ್ಟರ್ ಡಿ’ಮೆಲ್ಲೋ, ಹೋಲಿ ರಿಡೀಮರ್ ಸ್ಕೂಲ್ ಪ್ರಿನ್ಸಿಪಾಲ್ ರೆ. ಫಾ. ಕ್ಲಿಫರ್ಡ್ ಪಿಂಟೋ, ಪ್ಯಾರಿಷ್ ಕೌನ್ಸಿಲ್ ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೋ, ಉದ್ಯಮಿ ಪ್ರೇಮ್ ರಾಜ್ ಸಿಕ್ವೇರಾ, ಸಿಸ್ಟರ್ ಜೆಸಿಂತಾ, ಮತ್ತು ಸಹೋದರ ಅಲ್ರಿಕ್ ಚಾಲನೆ ನೀಡಿದರು.

ಐಸಿವೈಎಮ್ ಆನಿಮೇಟರ್‌ಗಳಾದ ವಿಲ್ಸನ್ ಮೋನಿಸ್, ಡಾ. ಫ್ಲಾವಿಯಾ ಪೌಲ್ ಮತ್ತು ವೈಸಿಎಸ್ ಆನಿಮೇಟರ್‌ಗಳಾದ ಜೇಮ್ಸ್ ಬಾರ್ಬೋಜಾ ಮತ್ತು ಶ್ರೀಮತಿ ಪ್ರೀತಾ ಅವರ ಮಾರ್ಗದರ್ಶನದಲ್ಲಿ, ಐಸಿವೈಎಮ್ ಅಧ್ಯಕ್ಷೆ ಅನ್ಸೆಲ್ಮಾ ಡಿಸೋಜಾ, ಐಸಿವೈಎಮ್ ಕಾರ್ಯದರ್ಶಿ ಅಜಯ್ ರೋಡ್ರಿಗಸ್, ವೈಸಿಎಸ್ ಕಾರ್ಯದರ್ಶಿ ಸ್ಟಾಲನ್ ಅವರ ನೇತೃತ್ವದಲ್ಲಿ, ಯುವಕರು ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು.

ಸುಮಾರು 30ಕ್ಕೂ ಹೆಚ್ಚಿನ ಉತ್ಸಾಹಿ ಯುವಕರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya

ಚಾಲಕ ಮಹೇಶ್ ಗೌಡ ನಿಧನ

Suddi Udaya

ಡಾ| ವೀಣಾ ಬನ್ನಂಜೆ ಅವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

Suddi Udaya

ಬಂಗಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತ್ರಿಶಲ ಜೈನ್ ಅವರಿಗೆ ಭಾರತ್ ಸ್ಕೌಟ್ ಗೈಡ್ ಎ.ಎಲ್.ಟಿ ಅರ್ಹತೆ

Suddi Udaya
error: Content is protected !!