23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ಬೆಳ್ತಂಗಡಿ, ಭಾರತೀಯ ಕಥೋಲಿಕ್ ಯುವ ಸಂಚಲನ ಬೆಳ್ತಂಗಡಿ ಘಟಕ, ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನವು ಆ.18 ರಂದು ಹೋಲಿ ರಿಡೀಮರ್ ಚರ್ಚ್ ಆವರಣದಿಂದ ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ಕಾರ್ಯಕ್ರಮ ನಡೆಯಿತು.

ಈ ಅಭಿಯಾನಕ್ಕೆ ವಂದನೀಯ ಸ್ವಾಮಿ ಫಾ. ವಾಲ್ಟರ್ ಡಿ’ಮೆಲ್ಲೋ, ಹೋಲಿ ರಿಡೀಮರ್ ಸ್ಕೂಲ್ ಪ್ರಿನ್ಸಿಪಾಲ್ ರೆ. ಫಾ. ಕ್ಲಿಫರ್ಡ್ ಪಿಂಟೋ, ಪ್ಯಾರಿಷ್ ಕೌನ್ಸಿಲ್ ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೋ, ಉದ್ಯಮಿ ಪ್ರೇಮ್ ರಾಜ್ ಸಿಕ್ವೇರಾ, ಸಿಸ್ಟರ್ ಜೆಸಿಂತಾ, ಮತ್ತು ಸಹೋದರ ಅಲ್ರಿಕ್ ಚಾಲನೆ ನೀಡಿದರು.

ಐಸಿವೈಎಮ್ ಆನಿಮೇಟರ್‌ಗಳಾದ ವಿಲ್ಸನ್ ಮೋನಿಸ್, ಡಾ. ಫ್ಲಾವಿಯಾ ಪೌಲ್ ಮತ್ತು ವೈಸಿಎಸ್ ಆನಿಮೇಟರ್‌ಗಳಾದ ಜೇಮ್ಸ್ ಬಾರ್ಬೋಜಾ ಮತ್ತು ಶ್ರೀಮತಿ ಪ್ರೀತಾ ಅವರ ಮಾರ್ಗದರ್ಶನದಲ್ಲಿ, ಐಸಿವೈಎಮ್ ಅಧ್ಯಕ್ಷೆ ಅನ್ಸೆಲ್ಮಾ ಡಿಸೋಜಾ, ಐಸಿವೈಎಮ್ ಕಾರ್ಯದರ್ಶಿ ಅಜಯ್ ರೋಡ್ರಿಗಸ್, ವೈಸಿಎಸ್ ಕಾರ್ಯದರ್ಶಿ ಸ್ಟಾಲನ್ ಅವರ ನೇತೃತ್ವದಲ್ಲಿ, ಯುವಕರು ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು.

ಸುಮಾರು 30ಕ್ಕೂ ಹೆಚ್ಚಿನ ಉತ್ಸಾಹಿ ಯುವಕರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.

Related posts

ಬೆಂಗಳೂರು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪೆನಿ ವತಿಯಿಂದ ನಾಳ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ವಿತರಣೆ

Suddi Udaya

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya

ಎನ್‌ಎಸ್‌ಎಸ್ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಶಿಬಿರಕ್ಕೆ ಟಿ. ಸುದರ್ಶನ್ ನಾಯಕ್ ಆಯ್ಕೆ

Suddi Udaya

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

Suddi Udaya
error: Content is protected !!