25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

ಉಜಿರೆ :ಆ19, “ಸಂಸ್ಕೃತ ಭಾಷೆ ಎಲ್ಲ ಭಾಷೆಗಳ ಜನನಿ. ಭಾರತದ ಪ್ರತಿಷ್ಠೆ ಎರಡು. ಮೊದಲನೆಯದು ಸಂಸ್ಕೃತಿ, ಎರಡನೆಯದು ಸಂಸ್ಕೃತ.” ಎಂದು ಸಂಸ್ಕೃತ ವಿದ್ವಾಂಸರು ಹಾಗೂ ಜೋತಿಷ್ಯರು ಆಗಿರುವ ಡಾ.ಯತೀಶ್ ಪೊದುವಾಳ್ ಇವರು ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ‘ಆತ್ಮಾನಂ ಸಂಸ್ಕೃತಂ ಮನ್ಯೆ’ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿದ್ದ ‘ಸಂಸ್ಕೃತೋತ್ಸವ’ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಕೃತ ಜಯ ಘೋಷಗಳೊಂದಿಗೆ ಮೆರವಣಿ, ಸಂಸ್ಕೃತ ವಸ್ತು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಶಾಲಾ ಶೈಕ್ಷಣಿಕ ಸಂಯೋಜಕಿ ಶಿಕ್ಷಕಿ ಸುಮಾ ಶ್ರೀನಾತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿಯರಾದ ಇನಿಕ ಮತ್ತು ಹರ್ಷಿಣಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಆಶುತೋಷ್ ಹಾಗೂ ದೀಪ್ತಿ ಜೈನ್ ಸ್ವಾಗತಿಸಿ, ಕಾರ್ಯಕ್ರಮದ ಸಂಯೋಜಕಿ ಶಿಕ್ಷಕಿ ಸುಜನ ವಲ್ತಾಜೆ ವಂದಿಸಿದರು.

Related posts

ಭೀಕರ ರಸ್ತೆ ಅಪಘಾತ – ಮೂವರಿಗೆ ಗಂಭೀರ ಗಾಯ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!