July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆಯ ಸಭೆಯು ನಾರಾವಿ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ಆ.18 ರಂದು ನಡೆಯಿತು.

ಮೇಲ್ವಿಚಾರಕರಾದ ದಮಯಂತಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ವಲಯದಲ್ಲಿ ಒಟ್ಟು 15 ಭಜನಾ ಮಂಡಳಿಗಳಿದ್ದು ಇದರಲ್ಲಿ ಒಬ್ಬರು ಸಂಚಾಲಕರು ಹಾಗೂ 5 ಮಂದಿ ಪದಾಧಿಕಾರಿಗಳ ಅಯ್ಕೆ ಮಾಡುವ ಬಗ್ಗೆ ತಿಳಿಸಿದರು. ನಂತರ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸಂಚಾಲಕರಾಗಿ ಸಂತೋಷ್ ಮರ್ದೋಟ್ಟು, ಅಧ್ಯಕ್ಷರಾಗಿ ರಾಜು ಪೂಜಾರಿ, ಉಪಾಧ್ಯಕ್ಷರಾಗಿ ಸುಧಾಕರ, ಕಾರ್ಯದರ್ಶಿ ಹರೀಶ್ ಯನ್, ಜತೆ ಕಾರ್ಯದರ್ಶಿ ಅಕ್ಷಯ್, ಕೋಶಾಧಿಕಾರಿಯಾಗಿ ಚಂದ್ರ ಶೇಖರ ರಾವ್ , ಹಾಗೂ ಯೋಗೀಶ್ ಆಚಾರ್ಯ, ಇವರನ್ನು ಭಜನಾ ಮಂಡಳಿಯ ಸದಸ್ಯರ ಉಪಸ್ಥಿತಿಯಲ್ಲಿ ಆಯ್ಕೆ ಮಾಡಲಾಯಿತು. ನಾರಾವಿ ಸೇವಾ ಪ್ರತಿನಿಧಿ ರೇಷ್ಮಾ ಉಪಸ್ಥಿತರಿದ್ದರು.

ಸೇವಾ ಪ್ರತಿನಿಧಿ ಹರಿಣಾಕ್ಷಿ ಸ್ವಾಗತಿಸಿದರು. ಸಭೆಯ ಕೊನೆಗೆ ಕೊಕ್ರಾಡಿ ಸಾವ್ಯ ಸೇವಾಪ್ರತಿನಿಧಿ ಶಶಿಧರ್ ಕುಲಾಲ್ ಧನ್ಯವಾದವಿತ್ತರು.

Related posts

ಉಜಿರೆ ನೀಲಿಯರ ಮನೆಯ ಜೋಮ ಕುರಿಯನ್ ನಿಧನ

Suddi Udaya

ಪೆರಿಂಜೆ: ಪಡ್ಡ್ಯಾರಬೆಟ್ಟ ದೈವಸ್ಥಾನ ಕ್ಷೇತ್ರ ವಾರ್ಷಿಕ ಜಾತ್ರೋತ್ಸವ ಸಂಪನ್ನ, ಸಾಧಕರಿಗೆ ಗೌರವ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪಾರೆಂಕಿ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಗೂಡಂಗಡಿ ವ್ಯಾಪಾರಿ ಶಿವಯ್ಯ ಪೂಜಾರಿ ನಿಧನ

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya
error: Content is protected !!