24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 6.74 ಲಕ್ಷ ಲಾಭ, ಶೇ.20 ಡಿವಿಡೆಂಟ್

ಬಳಂಜ: ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ 2023-24 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಶ್ರೀಮತಿ ಪುಷ್ಪಾರವರ ಅಧ್ಯಕ್ಷತೆಯಲ್ಲಿ ಆ.17 ರಂದು ಭಾಗಿ ಮುಂಡಪ್ಪ ಪೂಜಾರಿ ಸಭಾ ವೇದಿಕೆಯಲ್ಲಿ ಜರುಗಿತು.

ಸಂಘವು ರೂ.6.74 ಲಕ್ಷ ಲಾಭಗಳಿಸಿದ್ದು, ಸದಸ್ಯರಿಗೆ ಶೇ.65 ಬೋನಸ್ ಹಾಗೂ ಶೇ.20 ಡಿವಿಡೆಂಟ್ ನೀಡಲಾಗುವುದು.

ದ.ಕ ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಡಾ. ಸತೀಶ್ ರಾವ್ ಹಾಗೂ ವಿಸ್ತರಣಾಧಿಕಾರಿ ಸುಚಿತ್ರಾ ರವರು ಸಭೆಯಲ್ಲಿ ಸದಸ್ಯರಿಗೆ ಹೈನುಗಾರಿಕಾ ಮಾಹಿತಿಯನ್ನು ನೀಡಿದರು. ಉಪಾಧ್ಯಕ್ಷೆ ಮಾಲಿನಿ , ಶಾಂಭವಿ, ಅರುಣಾ ನಿರುಪಮಾ, ಉಷಾ, ಜಯಂತಿ, ಶೋಭಾ, ಯಶೋಧಾ, ಬೇಬಿ, ಉಪಸ್ಥಿತರಿದ್ದರು.

ಮುಖ್ಯ ನಿರ್ವಹಣಾಧಿಕಾರಿ ಭಾರತಿ ವರದಿ ಮತ್ತು ಲೆಕ್ಕ ಪತ್ರಗಳನ್ನು ಮಂಡಿಸಿದರು. ಸಂಘದ ಹಿರಿಯ ಹೈನುಗಾರರು , ನಿರ್ದೇಶಕರು ಆದ ಯಶೋದ ರವರನ್ನು ಸನ್ಮಾನಿಸಲಾಯಿತು. ಸಂಘಕ್ಕೆ ಅತೀ ಹೆಚ್ಚು ಹಾಲು ಹಾಕಿ ಪ್ರಥಮ ಸ್ಥಾನ ಪಡೆದ ಪ್ರಮೀಳಾ, ದ್ವಿತೀಯ ನಂದಿನಿ, ತೃತೀಯ ಮಾಲಿನಿ ಹಾಗೂ 9 ಜನ ಅತೀ ಹೆಚ್ಚು ಹಾಕಿದ ಗುಣವತಿ , ಮುಕ್ತಾ, ಅರುಣ ಹೆಗ್ಡೆ, ಹರ್ಷಿಣಿ, ಸುಖಾರೈ, ಜಯಶ್ರೀ, ಪುಷ್ಪಾ, ಹರ್ಷಲತಾ, ಉಷಾ ಇವರನ್ನು ಸಭೆಯಲ್ಲಿ ಗುರುತಿಸಲಾಯಿತು. ಎಸ್.ಎಸ್.ಎಲ್.ಸಿ ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಮನ್ವಿತಾ ಹಾಗೂ ರಕ್ಷಿತ್ ಗೆ ವಿದ್ಯಾರ್ಥಿ ವೇತನ ನೀಡಲಾಯಿತು.

ನಿರ್ದೇಶಕರಾದ ನಿರುಪಮಾ ಸ್ವಾಗತಿಸಿ, ಸದಸ್ಯೆ ನಂದಿನಿ ನಿರೂಪಿಸಿದರು. ಉಪಾಧ್ಯಕ್ಷೆ ಮಾಲಿನಿ ವಂದಿಸಿದರು. ಸಭೆಯಲ್ಲಿ ಸಂಘಕ್ಕೆ ಸ್ಥಳ ದಾನ ,ಮಾಡಿದಂತಹ ಹೆಚ್. ಧರ್ಣಪ್ಪ ಪೂಜಾರಿ ಯವರು ಉಪಸ್ಥಿತರಿದ್ದರು. ಸಿಬ್ಬಂದಿಗಳಾದ ಸುರೇಶ್ ಪೂಜಾರಿ ಜೈಮಾತಾ ಹಾಗೂ ರೇಶ್ಮಾ ಸಹಕರಿಸಿದರು.

Related posts

ಪಣಕಜೆ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಉದ್ಘಾಟನೆ

Suddi Udaya

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಮಲವಂತಿಗೆ: ಮೇಗಿನ ಕರಿಯಾಲು ನಿವಾಸಿ ಕೆ. ಸಂಜೀವ ಗೌಡ ನಿಧನ

Suddi Udaya

ಅಳದಂಗಡಿ: ಸೈಂಟ್ ಪೀಟರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya
error: Content is protected !!