24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ : ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಂಗ ಸಂಸ್ಥೆಯಾದ ರೋಟರಿ ಆನ್ಸ್ ಕ್ಲಬ್ ಇದರ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ ಆ. 15 ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಂಗಣದಲ್ಲಿ ನಡೆಯಿತು.


ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಅಧಿಕಾರ ಸ್ವೀಕರಿಸಿದರೆ, ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅವರು ಅಧಿಕಾರ ಸ್ವೀಕರಿಸಿದರು.

ಕಾರ್ಯಕ್ರಮದ ಅಧ್ಯಕ್ಷರಾಗಿ ರೊ ಪೂರನ್ ವರ್ಮ ಬಂದಂತಹ ಅತಿಥಿಗಳನ್ನು ಸ್ವಾಗತಿಸಿದರು .ಪದ ಪ್ರಧಾನ ಅಧಿಕಾರಿಯಾಗಿ ರೊ ಸೋನಿಯಾವರ್ಮ ನೂತನ ಪದಾಧಿಕಾರಿಗಳಿಗೆ ಅಧಿಕಾರ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ಯಾಗಿ ಮೂಡಬಿದ್ರೆಯ ನೋಟರಿ ವಕೀಲರಾದ ಶ್ರೀಮತಿ ಶ್ವೇತ ಜೈನ್ ಅವರು ಮಾತನಾಡಿ ಮಹಿಳೆಯರು ತಮ್ಮಲ್ಲಿ ನಾಯಕತ್ವ ಗುಣ ಹಾಗೂ ಸಮಾಜ ಸೇವೆ ಮಾಡುವಂತಹ ಮನೋಸ್ಥಿತಿ ಬೆಳೆಸಿಕೊಳ್ಳಬೇಕು ಎಂದರು.
ನಿರ್ಗಮನ ಅಧ್ಯಕ್ಷರಾದ ಡಾ.ಅನಿತಾ ದಯಾಕರ್ ಅವರು ತಮ್ಮ ಮನದಾಳದ ಮಾತನ್ನು ಆಡಿದರು.
ನೂತನ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ ಶ್ರೀಧರ್ ಅವರು ಮಾತನಾಡಿ ಆನ್ಸ್ ಕ್ಕಬ್ ನ ಅಧ್ಯಕ್ಷೆಯಾಗಿ ತನ್ನನ್ನು ಆಯ್ಕೆ ಮಾಡಿದ ರೋಟರಿ ಕ್ಲಬ್ ನ ಪದಾಧಿಕಾರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಇತರ ಸ್ಥಾನಗಳಿಗೆ ಆಯ್ಕೆಯಾದ ಪದಾಧಿಕಾರಿಗಳು ತಮ್ಮ ಅಧಿಕಾರ ಸ್ವೀಕರಿಸಿದರು ಹಾಗೂ ಕಳೆದ ಹದಿಮೂರು ವರ್ಷಗಳಲ್ಲಿ ಆನ್ಸ್ ಕ್ಲಬ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಸದಸ್ಯೆಯರನ್ನು ಅಭಿನಂದಿಸಲಾಯಿತು.

ಈ ಸಂಧರ್ಭದಲ್ಲಿ 2024 ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆಯಾಗಿರುವ ಡಿ.ಆರ್.ಎಫ್.ಓ ಕಮಲ ಹಾಗೂ ಯುವ ಪ್ರತಿಭಾನ್ವಿತ ಕಲಾವಿದೆ ಕುಮಾರಿ ಸಿಂಚನಾ ಅವರನ್ನು ಗೌರವಿಸಲಾಯಿತು ಹಾಗೂ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿನಿಯೋರ್ವಳಿಗೆ ವಿಧ್ಯಾರ್ಥಿ ವೇತನವನ್ನು ನೀಡಲಾಯಿತು. ವೇದಿಕೆಯಲ್ಲಿ ರೋಟರಿ ಕ್ಲಬ್ ನ ಕಾರ್ಯದರ್ಶಿ ಸಂದೇಶ್ ರಾವ್ ಉಪಸ್ಥಿತರಿದ್ದರು

ಕಾರ್ಯಕ್ರಮವು ಕುಮಾರಿ ಇಂಚರಾ ಕಾರಂತ್ ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಶ್ರೀಮತಿ ರಶ್ಮಿ ಪಟವರ್ಧನ್ ಹಾಗೂ ಶ್ರೀಮತಿ ವೈಷ್ಣವಿ‌ ಪ್ರಭು ಅವರು ಕಾರ್ಯಕ್ರಮವನ್ನು ನಿರೂಪಿಸಿದರೆ ಸುಜಾತ ಅಣ್ಣಿ ಪೂಜಾರಿ, ದೀಪ್ತಿ ಹೆಗ್ಡೆ , ಸ್ಮಿತಾ ಪ್ರಶಾಂತ್ ಜೈನ್, ಮಮತಾ ಶ್ರೀನಾಥ್, ಶೋಭಾ ಗೋಪಾಲಕೃಷ್ಣ, ರಶ್ಮಿ ಆದರ್ಶ್ ಕಾರಂತ್ ಅವರು ಸಹಕರಿಸಿದರು. ನೂತನ ಕಾರ್ಯದರ್ಶಿ ಡಾ. ವಿನಯಾ ಕಿಶೋರ್ ಅವರು ವಂದಿಸಿದರು.

Related posts

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya
error: Content is protected !!