23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

ನಾವರ ಗ್ರಾಮದ ದೇವರಗುಡ್ಡೆ ನಿವಾಸಿ ಹರೀಶ್ ಮೂಲ್ಯ ರವರು ಮರದ ಕಟ್ಟಿಂಗ್ ನ ಕೆಲಸ ಮಾಡುತ್ತಿರುವಾಗ ಮೆಷೀನ್ ಜಾರಿ ಅವರ ಕಾಲಿನ ಮೇಲೆ ಬಿದ್ದು ಸುಮಾರು 12 ಹೊಲಿಗೆಗಳನ್ನು ಹಾಕಿರುತ್ತಾರೆ. ಅವರ ಮಗನು ಶ್ರೀರಾಮ ಶಾಲೆ ಸುಳ್ಕೇರಿಯ ವಿದ್ಯಾರ್ಥಿಯಾಗಿದ್ದು ಅವನ ಕಾಲಿನ ಮೇಲೆ ಡೆಸ್ಕ್ ಬಿದ್ದು ಅವನು ಕೂಡ ಶಾಲೆಗೆ ಹೋಗಲಾರದೇ ಮನೆಯಲ್ಲಿಯೇ ಇದ್ದಾನೆ.. ತುಂಬಾ ಬಡತನದಲ್ಲಿರುವ ಅವರ ಕುಟುಂಬಕ್ಕೆ ಲಯನ್ಸ್ ಕ್ಲಬ್ ಬೆಳ್ತಂಗಡಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾವರ ಇವರ ವತಿಯಿಂದ 25 ಸಾವಿರ ರೂಪಾಯಿ ಯನ್ನು ಅವರ ಮನೆಗೆ ಹೋಗಿ ನೀಡಲಾಯಿತು.


ಈ ಸಂದರ್ಭ ಲಯನ್ಸ್ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಮರೋಡಿ, ನಾವರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದಂತಹ ಲಯನ್ ಪ್ರಕಾಶ್ ಶೆಟ್ಟಿ ನೊಚ್ಚ, ನಾವರ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷ ಲಯನ್ ನಿತ್ಯಾನಂದ ನಾವರ, ಆಡಳಿತ ಸಮಿತಿಯ ಸದಸ್ಯ ಲಯನ್ ರವಿ ಪೂಜಾರಿ ಹಾರಡ್ಡೆ, ಲಯನ್ ಪ್ರಶಾಂತ್ ಪೂಜಾರಿ ಹಿಮರಡ್ಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ ನ ಉಪನ್ಯಾಸಕಿ ಪುಷ್ಪಲತಾ ರಿಗೆ “ಗುರುವೇ ನಮಃ” ಅವಾರ್ಡ್

Suddi Udaya

ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕುರಿಯ ಪ್ರತಿಷ್ಠಾನದಿಂದ ಬಲಿಪ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಭಾಗವತಿಕೆ ಸ್ಪರ್ಧೆಗೆ ಆಹ್ವಾನ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya
error: Content is protected !!