25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ಬೆಳ್ತಂಗಡಿ, ಭಾರತೀಯ ಕಥೋಲಿಕ್ ಯುವ ಸಂಚಲನ ಬೆಳ್ತಂಗಡಿ ಘಟಕ, ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನವು ಆ.18 ರಂದು ಹೋಲಿ ರಿಡೀಮರ್ ಚರ್ಚ್ ಆವರಣದಿಂದ ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ಕಾರ್ಯಕ್ರಮ ನಡೆಯಿತು.

ಈ ಅಭಿಯಾನಕ್ಕೆ ವಂದನೀಯ ಸ್ವಾಮಿ ಫಾ. ವಾಲ್ಟರ್ ಡಿ’ಮೆಲ್ಲೋ, ಹೋಲಿ ರಿಡೀಮರ್ ಸ್ಕೂಲ್ ಪ್ರಿನ್ಸಿಪಾಲ್ ರೆ. ಫಾ. ಕ್ಲಿಫರ್ಡ್ ಪಿಂಟೋ, ಪ್ಯಾರಿಷ್ ಕೌನ್ಸಿಲ್ ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೋ, ಉದ್ಯಮಿ ಪ್ರೇಮ್ ರಾಜ್ ಸಿಕ್ವೇರಾ, ಸಿಸ್ಟರ್ ಜೆಸಿಂತಾ, ಮತ್ತು ಸಹೋದರ ಅಲ್ರಿಕ್ ಚಾಲನೆ ನೀಡಿದರು.

ಐಸಿವೈಎಮ್ ಆನಿಮೇಟರ್‌ಗಳಾದ ವಿಲ್ಸನ್ ಮೋನಿಸ್, ಡಾ. ಫ್ಲಾವಿಯಾ ಪೌಲ್ ಮತ್ತು ವೈಸಿಎಸ್ ಆನಿಮೇಟರ್‌ಗಳಾದ ಜೇಮ್ಸ್ ಬಾರ್ಬೋಜಾ ಮತ್ತು ಶ್ರೀಮತಿ ಪ್ರೀತಾ ಅವರ ಮಾರ್ಗದರ್ಶನದಲ್ಲಿ, ಐಸಿವೈಎಮ್ ಅಧ್ಯಕ್ಷೆ ಅನ್ಸೆಲ್ಮಾ ಡಿಸೋಜಾ, ಐಸಿವೈಎಮ್ ಕಾರ್ಯದರ್ಶಿ ಅಜಯ್ ರೋಡ್ರಿಗಸ್, ವೈಸಿಎಸ್ ಕಾರ್ಯದರ್ಶಿ ಸ್ಟಾಲನ್ ಅವರ ನೇತೃತ್ವದಲ್ಲಿ, ಯುವಕರು ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು.

ಸುಮಾರು 30ಕ್ಕೂ ಹೆಚ್ಚಿನ ಉತ್ಸಾಹಿ ಯುವಕರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಜ.6-10: ಎಸ್‌ಡಿಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಳೆಗನ್ನಡ ಪಠ್ಯಗಳ ಓದು ಮತ್ತು ಅರ್ಥೈಸುವಿಕೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!