ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜೊತೆಗೂಡಿ ನಡೆಸುತ್ತಿರುವ ಷಡ್ಯಂತ್ರ ಮತ್ತು ಮುಖ್ಯಮಂತ್ರಿಗಳ ಮೇಲೆ ನೀಡಿರುವ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಬೆಳ್ತಂಗಡಿ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ವತಿಯಿಂದ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗಿ ಬಂದು ತಾಲ್ಲೂಕು ಕಛೇರಿ ಮುಖಾಂತರ ರಾಷ್ಟ್ರಪತಿಗೆ ಮನವಿ ಕೊಡಲಾಯಿತು.

ಬಿಜೆಪಿ ಕೈ ಗೊಂಬೆಯಾಗಿ ವರ್ತಿಸುತ್ತಿರುವ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಮಿಣ ಬ್ಲಾಕ್‌ ಅಧ್ಯಕ್ಷರಾದ ನಾಗೇಶ್ ಗೌಡ, ಮಾಜಿ ಜಿಲ್ಲಾ ಪಂ ಸದಸ್ಯರಾದ ಧರಣೇಂದ್ರ ಕುಮಾರ್, ಶೇಖರ್ ಕುಕ್ಕೆಡಿ, ಮಹಿಳಾ ಹಾಗೂ ಯುವ ಕಾಂಗ್ರೆಸಿನ ಸದಸ್ಯರು,ಎನ್.ಎಸ್.ಯು.ಐ ಮತ್ತು ಎಲ್ಲಾ ಮುಂಚೂಣಿ ಘಟಕದವರು ಭಾಗವಹಿಸಿದರು.ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Suddi Udaya
error: Content is protected !!