25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ:: ಆರನೇ ತರಗತಿಯಿಂದ 9ನೇ ತರಗತಿ ವರೆಗೆ ಕಲಿಯುತ್ತಿರುವ ಶಾಲಾ ವಿದ್ಯಾರ್ಥಿಗಳಲ್ಲಿ ಅಂಚೆ ಚೀಟಿ ಸಂಗ್ರಹಣೆ ಬಗ್ಗೆ ಆಸಕ್ತಿ ಮೂಡಿಸುವುದಕ್ಕಾಗಿ ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅಂಚೆ ಇಲಾಖೆ ಅರ್ಜಿಗಳನ್ನು ಆಹ್ವಾನಿಸಿದೆ ಎಂದು ಪುತ್ತೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.


ಅರ್ಜಿಯನ್ನು ಇದೆ ಸೆಪ್ಟೆಂಬರ್ 3ರೊಳಗೆ ಹಿರಿಯ ಅಂಚೆ ಅಧೀಕ್ಷಕರು, ಪುತ್ತೂರು ವಿಭಾಗ, ಪುತ್ತೂರು-574201 ಇವರಿಗೆ ತ್ವರಿತ ಅಂಚೆ ಅಥವಾ ನೋಂದಾಯಿತ ಅಂಚೆ ಮೂಲಕ ಕಳುಹಿಸಬೇಕು.


ಕಳೆದ ಬಾರಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 60 ಕ್ಕಿಂತ ಅಧಿಕ ಅಂಕಗಳನ್ನು ಪಡೆದವರು ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ ಕ್ಲಬ್ ಸದಸ್ಯರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಛೇರಿಯಿಂದ ಪಡೆಯಬಹುದು ಎಂದು ಅಂಚೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Related posts

ಪಡುಮಲೆ ದೇಯಿ ಬೈದೆತಿ ಮೂಲಸ್ಥಾನದಲ್ಲಿ ಪ್ರಶ್ನಾ ಚಿಂತನೆ

Suddi Udaya

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya
error: Content is protected !!