September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ:: ಆರನೇ ತರಗತಿಯಿಂದ 9ನೇ ತರಗತಿ ವರೆಗೆ ಕಲಿಯುತ್ತಿರುವ ಶಾಲಾ ವಿದ್ಯಾರ್ಥಿಗಳಲ್ಲಿ ಅಂಚೆ ಚೀಟಿ ಸಂಗ್ರಹಣೆ ಬಗ್ಗೆ ಆಸಕ್ತಿ ಮೂಡಿಸುವುದಕ್ಕಾಗಿ ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅಂಚೆ ಇಲಾಖೆ ಅರ್ಜಿಗಳನ್ನು ಆಹ್ವಾನಿಸಿದೆ ಎಂದು ಪುತ್ತೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.


ಅರ್ಜಿಯನ್ನು ಇದೆ ಸೆಪ್ಟೆಂಬರ್ 3ರೊಳಗೆ ಹಿರಿಯ ಅಂಚೆ ಅಧೀಕ್ಷಕರು, ಪುತ್ತೂರು ವಿಭಾಗ, ಪುತ್ತೂರು-574201 ಇವರಿಗೆ ತ್ವರಿತ ಅಂಚೆ ಅಥವಾ ನೋಂದಾಯಿತ ಅಂಚೆ ಮೂಲಕ ಕಳುಹಿಸಬೇಕು.


ಕಳೆದ ಬಾರಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 60 ಕ್ಕಿಂತ ಅಧಿಕ ಅಂಕಗಳನ್ನು ಪಡೆದವರು ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ ಕ್ಲಬ್ ಸದಸ್ಯರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಛೇರಿಯಿಂದ ಪಡೆಯಬಹುದು ಎಂದು ಅಂಚೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Related posts

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!