23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ ಹಾಗೂ ವಿಶ್ವ ಫೋಟೋಗ್ರಾಫರ್ಸ್‌ ದಿನಾಚರಣೆ

ಉಜಿರೆ : ಫೋಟೋಗ್ರಫಿಯ ವೃತ್ತಿಯಲ್ಲಿ ಯಾವ ಸಂಧರ್ಭದಲ್ಲಿ, ಯಾವ ಉದ್ದೇಶ ಯಾವ ಸಮಯದಲ್ಲಿ ಭಾವನೆಗಳನ್ನು ನೋಡಿ ಫೋಟೋ ತೆಗೆಯು ಜಾಣ್ಮೆಯನ್ನು ಹೊಂದಿರುವುದು ಬಹುಮುಖ್ಯ. ಫೋಟೋಗ್ರಫಿ ಬಹಳ ಗಂಭೀರವಾದ ವಿಷಯ ಎಲ್ಲ ಕಡೇ ದಾಖಲೆಯಾಗಿ ಬಳಸುದಂತಾಗಿದೆ. ಇನ್ನೂ ಫೋಟೋಗ್ರಫಿಯಲ್ಲಿ ಬೆಳಕಿನ ಮಹತ್ವವನ್ನು ತಿಳಿದುಕೊಳ್ಳಬೇಕು, ಯಾವ ಬೆಳಕಿನಲ್ಲಿ ಯಾವ ರೀತಿಯ ಫೋಟೋ ತೆಗೆಯಬೇಕು, ಫೋಟೋ ತೆಗೆಯುವ ಮೊದಲು ಮೂಡ್‌ ಅನ್ನು ಗಮನಿಸಬೇಕು ಆವಾಗ ಮಾತ್ರ ಸುಂದರವಾದ ಫೋಟೋ ಮೂಡಿಬರುತ್ತದೆ. ಅಲ್ಲದೇ ಆಲ್ಬಾಮ್‌ ಮಾಡುವಾಗ ಹತ್ತು ಸರಿ ನೋಡುವ ರೀತಿಯಲ್ಲಿ ತಯಾರಿಸಬೇಕು. ಇವತ್ತು ವಿವಿಧ ರೀತಿಯ ಪ್ರಿಂಟಿಂಗ್‌ ಪೇಪರ್‌ ಬಂದಿದೆ ಅದರ ಜ್ಞಾನ ಇರಲಿ. ಜೀವನದಲ್ಲಿ ಶಿಸ್ತು ಕಲಿತ್ತಿದ್ದೀರಿ, ಬದುಕಿನಲ್ಲಿ ಶಿಸ್ತು ಸಹ ಮುಖ್ಯ ಅದನ್ನು ಮುಂದುವರೆಯಿಸಿಕೊಳ್ಳಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು, ರುಡ್‌ ಸೆಟ್‌ ಸಂಸ್ಥೆಗಳ ಅಧ್ಯಕ್ಷ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯಪಟ್ಟರು.


ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದೆ *ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ ಹಾಗೂ ವಿಶ್ವ ಫೋಟೋಗ್ರಾಫರ್ಸ್‌ ದಿನಾಚರಣೆಯಲ್ಲಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತ್ತರಿಸಿ, ಧರ್ಮಸ್ಥಳದ ಮ್ಯೂಸಿಯಂನಲ್ಲಿ ಸುಮಾರು 700 ಕ್ಯಾಮರಾಗಳು ಇವೆ. ಇದು ಪೋಟೋಗ್ರಾಫಿಯಲ್ಲಿ ಕ್ಯಾಮರಗಳ ಮೌಲ್ಯ ವರ್ಧನೆಯನ್ನು ತೋರಿಸುತ್ತದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಮುಂದಿನ ಬೆಳವಣಿಗೆಯನ್ನು ನಿಮ್ಮ ಬುದ್ದಿವಂತಿಕೆಯಲ್ಲಿ ಮಾಡಿಕೊಳ್ಳಬೇಕು ಎಂದು ತಿಳಸಿ ಶುಭ ಹಾರೈಸಿದರು.


ಸಮಾರಂಭದ ವೇದಿಕೆಯಲ್ಲಿ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ. ಎನ್‌ ಜರ್ನಾಧನ ಭಾಗವಹಿಸಿ, ರುಡ್‌ ಸೆಟ್‌ ಸಂಸ್ಥೆಯು ಬೆಳದು ಬಂದ ದಾರಿಯನ್ನು ನೆನಪಿಸಿದರು.
ಕಾರ್ಯಕ್ರಮದಲ್ಲಿ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ.ವಿಜಯ ಕುಮಾರ್ ಭಾಗವಹಿದ್ದರು.
ಪೋಟೋಗ್ರಾಫಿ ಮತ್ತು ವೀಡಿಯೋಗ್ರಾಫಿ ತರಬೇತಿಯ ಅತಿಥಿ ಉಪನ್ಯಾಸಕರಾದ ಸೂರ್ಯಪ್ರಕಾಶ ಉಪಸ್ಥಿತರಿದ್ದರು.
ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಅವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ವಂದಿಸಿದರು. ಸುಮಾರು 31 ಜನ ಶಿಬಿರಾರ್ಥಿಗಳು ಭಾಗವಹಿಸಿದ್ದರು, ಹೇಮಂತ್ ಪ್ರಾರ್ಥನೆ ಮಾಡಿದರು, ಜಯರಾಮ್‌, ಸಿದ್ಧಾರ್ಥ ತರಬೇತಿಯ ಅನುಭವ ಹಂಚಿಕೊಂಡರು.

Related posts

ಬಂದಾರು: ಮೈರೋಳ್ತಡ್ಕ ಸ.ಉ. ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯಸ್ಮರಣೆ ಆಚರಣೆ

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”

Suddi Udaya

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣೆ

Suddi Udaya
error: Content is protected !!