ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

Suddi Udaya

ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಘಟಕದ ವತಿಯಿಂದ ಕೃಷಿ ಮಾಹಿತಿ ಮತ್ತು ಕೆಸರುಗದ್ದೆ ಕೂಟ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜುನ ಪ್ರಾಂಶುಪಾಲರಾದ ಸಂತೋಷ್ ಇವರು ವಹಿಸಿದ್ದರು ಹಾಗೂ ಮುಖ್ಯ ಅತಿಥಿಗಳಾಗಿ ಬೂಚ ನಾಯ್ಕ ಪೆರ್ಲ ಕೃಷಿಕರು ಇವರು ವಹಿಸಿ ವಿದ್ಯಾರ್ಥಿಗಳಿಗೆ ಕೃಷಿಯ ಮಹತ್ವ ಮತ್ತು ಗದ್ದೆ ಕೃಷಿ ಹಾಗೂ ಅಡಿಕೆ ತೋಟದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು.


ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಯೋಜನಾಧಿಕಾರಿಗಳಾದ ಪ್ರಕಾಶ್ ಮತ್ತು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎಲ್ಲಾ
ಭೋದಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಎನ್ ಎಸ್ ಎಸ್ ನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Comment

error: Content is protected !!