July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

ಕುಂಟಾಲಪಳಿಕೆ: ಸಮನ್ವಿ ಕಿಶೋರಿ ಸಂಘದ ಉದ್ಘಾಟನೆಯನ್ನು ಪೆರ್ಲ ಶಾಲೆಯ ಮುಖ್ಯೋಪಾಧ್ಯಾಯರಾದ ಉಷಾ.ವಿ. ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದಲ್ಲಿ ಆ.15ರಂದು ದೀಪ ಬೆಳಗುವ ಮೂಲಕ ನೆರವೇರಿಸಿದರು.

ಮೇಘಶ್ರೀ ಹಾಗೂ ರೂಪಶ್ರೀ ಇವರ ಪ್ರಾರ್ಥನೆಯ ಮೂಲಕ ಕಾರ್ಯಕ್ರಮ ಆರಂಭಗೊಂಡಿತು . ಆರೋಗ್ಯ ಕಾರ್ಯಕರ್ತೆ ರೇಖಾ ಹದಿಹರೆಯಾದ ಮಕ್ಕಳ ಶಾರೀರಿಕ, ಮಾನಸಿಕ ಆರೋಗ್ಯದ ಮೇಲಾಗುವ ಪರಿಣಾಮದ ಬಗ್ಗೆ ಹೆತ್ತವರ ಜವಾಬ್ದಾರಿ ಬಗ್ಗೆ ಮಾಹಿತಿ ನೀಡಿದರು. ಸಂಘದ ಅಧ್ಯಕ್ಷರಾದ ಲಿಖಿತ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಶ್ರೀಮತಿ ದಿವ್ಯಜೋತಿ, ಶ್ರೀಮತಿ ವಿಮಲ ಆರ್ ಶೆಟ್ಟಿ, ಆಶಾ ಕಾರ್ಯಕರ್ತೆ ಶ್ರೀಮತಿ ಕವಿತಾ, ಕುಂಟಾಲಪಳಿಕೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸತ್ಯ ಪ್ರಭಾ. ಎಸ್, ಉಪಸ್ಥಿತರಿದ್ದರು.

ತಾಯಂದಿರು, ಕಿಶೋರಿಯರು, ಹಾಜರಿದ್ದು ಕಾರ್ಯಕ್ರಮದಲ್ಲಿ ಸುಶ್ಮಿತಾ ಸ್ವಾಗತಿಸಿ, ಸುಮ ವಂದಿಸಿದರು. ಧನಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಮಕ್ಕಳಾದ ಅವನಿ, ಭೂಮಿಕಾ, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

Related posts

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಯುಧ ಪೂಜೆ ಸಂಭ್ರಮ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ಶಿಬಾಜೆ ಜನಸ್ಪಂದನ ಸಭೆ

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya
error: Content is protected !!