September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

ಕೊಯ್ಯೂರು : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.20 ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ದಯಾಮಣಿ ರವರ ಅಧ್ಯಕ್ಷತೆಯಲ್ಲಿ ಪಂಚದುರ್ಗಾ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಸಾಮಾಜಿಕ ಅರಣ್ಯ ಇಲಾಖೆ, ವಲಯ ಅರಣ್ಯಾಧಿಕಾರಿ ರವಿಕುಮಾರ್ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.

ಕೊಯ್ಯೂರು 4ನೇ ವಾರ್ಡ್ ಬಜಿಲ ಶಾಲೆಗೆ ಎಷ್ಟು ಅನುದಾನ ಇಟ್ಟಿದೀರಿ? ಶಾಲೆ ಬೀಳುವ ಹಂತದಲ್ಲಿದೆ ಎಂದು ಗ್ರಾಮಸ್ಥರು ಪಂಚಾಯತ್ ಹಾಗೂ ಶಿಕ್ಷಣ ಇಲಾಖೆಗೆ ಪ್ರಶ್ನಿಸಿದರು.

ಗ್ರಾಮ ಪಂಚಾಯತ್ ವತಿಯಿಂದ ಕೊಯ್ಯೂರು ಸಾಂತ್ಯೋಡಿಯಲ್ಲಿ ಉತ್ತಮವಾದ ಬಸ್ಸ್ಟ್ಯಾಂಡ್ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರಾದ ರಮೇಶ್ ಪಂಚಾಯತ್ ಗೆ ಅಭಿನಂದಿಸಿದರು. ಗ್ರಾಮಸ್ಥರಾದ ಸಿದ್ದೀಕ್, ಕಳೆದ ಕೆಲ ದಿನಗಳ ಹಿಂದೆ ನಿರಂತರವಾಗಿ ಸುರಿದ ಮಳೆಯ ಸಂದರ್ಭದಲ್ಲಿ ಮೆಸ್ಕಾಂ ಇಲಾಖೆ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಪ್ರಶಂಸಿಸಿದರು.

ಸಭೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷ ಹರೀಶ್, ಸದಸ್ಯರಾದ ಜಗನ್ನಾಥ, ದಿವ್ಯ, ಗಿರೀಶ, ಯಶವಂತ, ಶಾರದಾ, ವಿಶಾಲಾಕ್ಷಿ, ಲೋಕೇಶ, ಹೇಮಾವತಿ, ಇಸುಬು, ಕೆ. ಚಂದ್ರಾವತಿ, ಸುಮಿತಾ ವಿವಿಧ ಹಾಗೂ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಸ್ವಾಗತಿಸಿದರು. ಕಾರ್ಯದರ್ಶಿ ಪರಮೇಶ್ವರ ಜಮಾಖರ್ಚು ಮಂಡಿಸಿದರು. ಪಂ. ಸದಸ್ಯ ಯಶವಂತ ಗೌಡ ಧನ್ಯವಾದವಿತ್ತರು.

Related posts

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Suddi Udaya

ಬೈಕ್ ಹಾಗೂ ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ : ಬೈಕ್‌ ಸವಾರ ಸಾವು

Suddi Udaya

ಪಿಲ್ಯ: ಸದಾಶಿವ ಆಠವಳೆ ನಿಧನ

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya

ನೆರಿಯ : ತೋಟತ್ತಾಡಿ, ದಡ್ಡುವಿನಲ್ಲಿ ನೀರಲ್ಲಿ ಸಿಲಿಕಿಕೊಂಡ ಕಾರು

Suddi Udaya
error: Content is protected !!