31.1 C
ಪುತ್ತೂರು, ಬೆಳ್ತಂಗಡಿ
April 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಳ್ತಂಗಡಿ: ಕೊಲ್ಕತ್ತಾ ಅರ್ಜೆಕರ್ ಸರ್ಕಾರಿ ಮೆಡಿಕಲ್ ಆಸ್ಪತ್ರೆಯಲ್ಲಿ ಮೌಮಿತ ದೇಬನಾಥ್ ಎಂಬ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಆ. 20 ರಂದು ವಿದ್ವತ್ ಪಿಯು ಕಾಲೇಜ್ ಗುರುವಾಯನಕೆರೆಯಲ್ಲಿ ಆಡಳಿತ ವರ್ಗ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಂದ ಪ್ರತಿಭಟನೆ ಮತ್ತು ಮೌನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆಯವರು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಬೇಕೆಂದು ಆಗ್ರಹಿಸಿ, ಪ್ರತಿಭಟನೆಗೆ ಶಕ್ತಿ ತುಂಬಿದರು. ನಂತರ ವಿದ್ಯಾರ್ಥಿಗಳೆಲ್ಲರೂ ಎರಡು ನಿಮಿಷದ ಮೌನಚರಣೆ ಆಚರಿಸಿ ಸಂತ್ರಸ್ತೆಯ ಆತ್ಮಕ್ಕೆ ಶಾಂತಿ ಕೋರಿದರು. ಹೆಣ್ಣು ಮಕ್ಕಳ ಸುರಕ್ಷತೆಗೆ ಎಲ್ಲಾ ಸರ್ಕಾರಗಳೂ ಪ್ರಥಮ ಆದ್ಯತೆ ನೀಡಬೇಕೆಂದು ಎಲ್ಲಾ ವಿದ್ಯಾರ್ಥಿಗಳ ಒಕ್ಕೊರಲಿನಿಂದ ಆಗ್ರಹಿಸಿ, ಭಿತ್ತಿಪತ್ರ ಪ್ರದರ್ಶಿಸಿದರು.

ಈ ಪ್ರತಿಭಟನೆಯಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಸುಭಾಷ್ ಚಂದ್ರ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರಜ್ವಲ್ ರೈ ಕೋಶಾಧಿಕಾರಿಗಳಾದ ಎಂಕೆ ಕಾಶಿನಾಥ್ ರವರು ಉಪಸ್ಥಿತರಿದ್ದರು, ಕಾರ್ಯಕ್ರಮದ ನಿರೂಪಣೆಯನ್ನು ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಗೌಡರವರು ನೆರವೇರಿಸಿದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

Suddi Udaya

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ