July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಳ್ತಂಗಡಿ: ಕೊಲ್ಕತ್ತಾ ಅರ್ಜೆಕರ್ ಸರ್ಕಾರಿ ಮೆಡಿಕಲ್ ಆಸ್ಪತ್ರೆಯಲ್ಲಿ ಮೌಮಿತ ದೇಬನಾಥ್ ಎಂಬ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಆ. 20 ರಂದು ವಿದ್ವತ್ ಪಿಯು ಕಾಲೇಜ್ ಗುರುವಾಯನಕೆರೆಯಲ್ಲಿ ಆಡಳಿತ ವರ್ಗ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಂದ ಪ್ರತಿಭಟನೆ ಮತ್ತು ಮೌನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆಯವರು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಬೇಕೆಂದು ಆಗ್ರಹಿಸಿ, ಪ್ರತಿಭಟನೆಗೆ ಶಕ್ತಿ ತುಂಬಿದರು. ನಂತರ ವಿದ್ಯಾರ್ಥಿಗಳೆಲ್ಲರೂ ಎರಡು ನಿಮಿಷದ ಮೌನಚರಣೆ ಆಚರಿಸಿ ಸಂತ್ರಸ್ತೆಯ ಆತ್ಮಕ್ಕೆ ಶಾಂತಿ ಕೋರಿದರು. ಹೆಣ್ಣು ಮಕ್ಕಳ ಸುರಕ್ಷತೆಗೆ ಎಲ್ಲಾ ಸರ್ಕಾರಗಳೂ ಪ್ರಥಮ ಆದ್ಯತೆ ನೀಡಬೇಕೆಂದು ಎಲ್ಲಾ ವಿದ್ಯಾರ್ಥಿಗಳ ಒಕ್ಕೊರಲಿನಿಂದ ಆಗ್ರಹಿಸಿ, ಭಿತ್ತಿಪತ್ರ ಪ್ರದರ್ಶಿಸಿದರು.

ಈ ಪ್ರತಿಭಟನೆಯಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಸುಭಾಷ್ ಚಂದ್ರ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರಜ್ವಲ್ ರೈ ಕೋಶಾಧಿಕಾರಿಗಳಾದ ಎಂಕೆ ಕಾಶಿನಾಥ್ ರವರು ಉಪಸ್ಥಿತರಿದ್ದರು, ಕಾರ್ಯಕ್ರಮದ ನಿರೂಪಣೆಯನ್ನು ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಗೌಡರವರು ನೆರವೇರಿಸಿದರು.

Related posts

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya

ಬೆಳ್ತಂಗಡಿ ಪಿಡಬ್ಲೂಡಿ ಎಇಇ ಆಗಿ ಸಂಜೀವ ಕುಮಾರ್ ಜಿ .ಕೆ.

Suddi Udaya

ಬೆಳ್ತಂಗಡಿ : ನೋಂದಣಾಧಿಕಾರಿ ಹೊನ್ನಪ್ಪ ಗೌಡ ರವರಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಎಸ್.ಐ ಆರ್ ನ ಗಣತಿ ಫಾರಂ ವಿತರಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya

ಕಕ್ಕಿಂಜೆ ಇಷ್ಟ ದೇವತಾ ಬೆಟ್ಟ ಶ್ರೀ ಇಷ್ಟ ದೇವತಾ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!