23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಳ್ತಂಗಡಿ: ಕೊಲ್ಕತ್ತಾ ಅರ್ಜೆಕರ್ ಸರ್ಕಾರಿ ಮೆಡಿಕಲ್ ಆಸ್ಪತ್ರೆಯಲ್ಲಿ ಮೌಮಿತ ದೇಬನಾಥ್ ಎಂಬ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಆ. 20 ರಂದು ವಿದ್ವತ್ ಪಿಯು ಕಾಲೇಜ್ ಗುರುವಾಯನಕೆರೆಯಲ್ಲಿ ಆಡಳಿತ ವರ್ಗ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಂದ ಪ್ರತಿಭಟನೆ ಮತ್ತು ಮೌನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆಯವರು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಬೇಕೆಂದು ಆಗ್ರಹಿಸಿ, ಪ್ರತಿಭಟನೆಗೆ ಶಕ್ತಿ ತುಂಬಿದರು. ನಂತರ ವಿದ್ಯಾರ್ಥಿಗಳೆಲ್ಲರೂ ಎರಡು ನಿಮಿಷದ ಮೌನಚರಣೆ ಆಚರಿಸಿ ಸಂತ್ರಸ್ತೆಯ ಆತ್ಮಕ್ಕೆ ಶಾಂತಿ ಕೋರಿದರು. ಹೆಣ್ಣು ಮಕ್ಕಳ ಸುರಕ್ಷತೆಗೆ ಎಲ್ಲಾ ಸರ್ಕಾರಗಳೂ ಪ್ರಥಮ ಆದ್ಯತೆ ನೀಡಬೇಕೆಂದು ಎಲ್ಲಾ ವಿದ್ಯಾರ್ಥಿಗಳ ಒಕ್ಕೊರಲಿನಿಂದ ಆಗ್ರಹಿಸಿ, ಭಿತ್ತಿಪತ್ರ ಪ್ರದರ್ಶಿಸಿದರು.

ಈ ಪ್ರತಿಭಟನೆಯಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಸುಭಾಷ್ ಚಂದ್ರ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರಜ್ವಲ್ ರೈ ಕೋಶಾಧಿಕಾರಿಗಳಾದ ಎಂಕೆ ಕಾಶಿನಾಥ್ ರವರು ಉಪಸ್ಥಿತರಿದ್ದರು, ಕಾರ್ಯಕ್ರಮದ ನಿರೂಪಣೆಯನ್ನು ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಗೌಡರವರು ನೆರವೇರಿಸಿದರು.

Related posts

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

Suddi Udaya

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya
error: Content is protected !!