25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

ತೆಂಕಕಾರಂದೂರು: ವಾದ್ಯ, ನಾಟ್ಯ, ಭಜನೆಯಂತಹ ಯಾವುದೇ ಕಲೆಯು ಸಿದ್ಧಿಸಬೇಕಾದರೆ ಶಾಸ್ತ್ರೀಯ ಸಂಗೀತವೇ ಅಡಿಪಾಯ ಎಂದು ಭರತನಾಟ್ಯ ವಿದುಷಿ ಶ್ರೀಮತಿ ನಿಶಾಪ್ರಸಾದ್ ಹೇಳಿದರು.


ಅವರು ತೆಂಕಕಾರಂದೂರಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ಶ್ರೀರಾಗ ಸಂಗೀತ ಶಾಲೆ ಉದ್ಘಾಟಿಸಿ ಮಾತನಾಡಿದರು. ಸಂಗೀತ ಮತ್ತು ಭರತನಾಟ್ಯಗಳೆರಡೂ ಒಂದೇ ಗಾಡಿಯ ಎರಡು ಚಕ್ರಗಳಿದ್ದಂತೆ. ಸಂಗೀತವು ಮನಸ್ಸಿನ ಏಕಾಗ್ರತೆಯನ್ನು ಹೆಚ್ಚಿಸುವುದರ ಜೊತೆಗೆ ರಾಗಬದ್ಧವಾಗಿ ಹಾಡುವುದರಿಂದ ಭಗವಂತನ ಸ್ತುತಿ ಮಾಡಿ ನೆಮ್ಮದಿಯನ್ನು ಕಂಡುಕೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟರು.


ಶ್ರೀಮತಿ ಉಮಾ ಶಂಕರನಾರಾಯಣ ಉಪಾಧ್ಯಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀರಾಗ ಸಂಗೀತ ಶಾಲೆಯ ಶಿಕ್ಷಕಿ ಶ್ರೀಮತಿ ಶ್ರೀಪ್ರಿಯಾ ಪರಕ್ಕಜೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಪ್ರತಿ ಭಾನುವಾರ ಈ ತರಬೇತಿಯು ಮುಂದುವರೆಯುವುದಾಗಿ ತಿಳಿಸಿದರು.


ರವಿ ಪರಕ್ಕಜೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಸ್ತ್ರೀಯ ಸಂಗೀತ ತರಬೇತಿ ನಡೆಯಿತು.

Related posts

ಗುರಿಪಳ್ಳ ಒಕ್ಕೂಟದ ವತಿಯಿಂದ ನಿಡಿಗಲ್ ದೇವಸ್ಥಾನದಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ವಿಟಿಯು ಅಂತರ್ ಕಾಲೇಜು ಕ್ರಿಕೆಟ್ ಟೂರ್ನಿ : ಉಜಿರೆಯ ಎಸ್.ಡಿ.ಎಂ ಗೆ ಪ್ರಶಸ್ತಿ

Suddi Udaya

ನಡ ಸ.ಹಿ.ಪ್ರಾ. ಶಾಲಾ ಶತಮಾನೋತ್ಸವ ಸಮಿತಿಯಿಂದ ಡಾ|| ಹೆಗ್ಗಡೆಯವರ ಭೇಟಿ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

Suddi Udaya

ಮುಂಡಾಜೆ : ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

Suddi Udaya
error: Content is protected !!