July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

ತೆಂಕಕಾರಂದೂರು: ವಾದ್ಯ, ನಾಟ್ಯ, ಭಜನೆಯಂತಹ ಯಾವುದೇ ಕಲೆಯು ಸಿದ್ಧಿಸಬೇಕಾದರೆ ಶಾಸ್ತ್ರೀಯ ಸಂಗೀತವೇ ಅಡಿಪಾಯ ಎಂದು ಭರತನಾಟ್ಯ ವಿದುಷಿ ಶ್ರೀಮತಿ ನಿಶಾಪ್ರಸಾದ್ ಹೇಳಿದರು.


ಅವರು ತೆಂಕಕಾರಂದೂರಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ಶ್ರೀರಾಗ ಸಂಗೀತ ಶಾಲೆ ಉದ್ಘಾಟಿಸಿ ಮಾತನಾಡಿದರು. ಸಂಗೀತ ಮತ್ತು ಭರತನಾಟ್ಯಗಳೆರಡೂ ಒಂದೇ ಗಾಡಿಯ ಎರಡು ಚಕ್ರಗಳಿದ್ದಂತೆ. ಸಂಗೀತವು ಮನಸ್ಸಿನ ಏಕಾಗ್ರತೆಯನ್ನು ಹೆಚ್ಚಿಸುವುದರ ಜೊತೆಗೆ ರಾಗಬದ್ಧವಾಗಿ ಹಾಡುವುದರಿಂದ ಭಗವಂತನ ಸ್ತುತಿ ಮಾಡಿ ನೆಮ್ಮದಿಯನ್ನು ಕಂಡುಕೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟರು.


ಶ್ರೀಮತಿ ಉಮಾ ಶಂಕರನಾರಾಯಣ ಉಪಾಧ್ಯಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀರಾಗ ಸಂಗೀತ ಶಾಲೆಯ ಶಿಕ್ಷಕಿ ಶ್ರೀಮತಿ ಶ್ರೀಪ್ರಿಯಾ ಪರಕ್ಕಜೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಪ್ರತಿ ಭಾನುವಾರ ಈ ತರಬೇತಿಯು ಮುಂದುವರೆಯುವುದಾಗಿ ತಿಳಿಸಿದರು.


ರವಿ ಪರಕ್ಕಜೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಸ್ತ್ರೀಯ ಸಂಗೀತ ತರಬೇತಿ ನಡೆಯಿತು.

Related posts

ಶಿಶಿಲದಲ್ಲಿ 28ನೇ ವರ್ಷದ ಮೊಸರು ಕುಡಿಕೆ ಉತ್ಸವ, ಪ್ರತಿಭಾ ಪುರಸ್ಕಾರ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಜನರ ನೆಮ್ಮದಿ ಕೆಡಿಸಿದೆ ನೆಮ್ಮದಿ ಕೇಂದ್ರ: ಶೀಘ್ರವೇ ಬಾಜರು – ಜೋಡುಕಟ್ಟೆ ರಸ್ತೆ ದುರಸ್ತಿ – ಶಾಸಕ ಹರೀಶ್ ಪೂಂಜ

Suddi Udaya
error: Content is protected !!