25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ ಉದ್ಘಾಟನೆ

ಲಾಯಿಲ : ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವವು ಆ.20ರಿಂದ ಪ್ರಾರಂಭಗೊಂಡು ಆ.22 ರವರೆಗೆ ನಡೆಯಲಿದೆ.

ಕಾರ್ಯಕ್ರಮವನ್ನು ಪುತ್ತೂರು ವಾಣಿಜ್ಯ ತೆರಿಗೆ ಅಧಿಕಾರಿ ಯತೀಶ್ ಸಿರಿಮಜಲ್ ದೀಪ ಬೆಳಗಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಟ್ರಸ್ಟಿ ಅಧ್ಯಕ್ಷರಾದ ಪೀತಾಂಬರ ಹೇರಾಜೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಲಾಯಿಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಜಯಂತಿ ಎಂ ಕೆ . ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಕ್ಷಿತ್ ಶಿವರಾಂ, ಬೆಂಗಳೂರು ಉದ್ಯಮಿ ನಾರಾಯಣ ಬೇಗೂರು, ಮೋಹನ್ ದಾಸ್ ಕೊರ್ನಯ ಬೆಳ್ತಂಗಡಿ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸಿದ ಮೋಹನ್ ದಾಸ್ ಕೊರ್ನಯ ದಂಪತಿಗಳನ್ನು ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು. ಟ್ರಸ್ಟಿನ ಕಾರ್ಯದರ್ಶಿಗಳಾದ ವಸಂತ್ ಸುವರ್ಣ ಸ್ವಾಗತಿಸಿದರು. ಟ್ರಸ್ಟಿಗಳಾದ ಶ್ರೀಮತಿ ಉಮಾ ರಂಜನ್ ರಾವ್ ಧನ್ಯವಾದ ನೀಡಿದರು. ಸುರೇಶ್ ಶೆಟ್ಟಿ ಲಾಯಿಲ ಕಾರ್ಯಕ್ರಮ ನಿರೂಪಿಸಿದರು.

ಈ ವೇಳೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

Related posts

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

Suddi Udaya

ಆ.25: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಮಕ್ಕಳಿಗೆ ತಾಲೂಕು ಮಟ್ಟದ ಮುದ್ದುಕೃಷ್ಣ ,ಬಾಲಕೃಷ್ಣ, ಕೃಷ್ಣ ವೇಷ ಸ್ಪರ್ಧೆ, ಹೆಸರು ನೊಂದಾಯಿಸಲು ಕೊ.ದಿ. ಆ. 20-2024, ಮಾಹಿತಿಗಾಗಿ 8971689755 ಸಂಪರ್ಕಿಸಿರಿ

Suddi Udaya

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ಬೆಳ್ತಂಗಡಿ : ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!