28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ ಉದ್ಘಾಟನೆ

ಲಾಯಿಲ : ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವವು ಆ.20ರಿಂದ ಪ್ರಾರಂಭಗೊಂಡು ಆ.22 ರವರೆಗೆ ನಡೆಯಲಿದೆ.

ಕಾರ್ಯಕ್ರಮವನ್ನು ಪುತ್ತೂರು ವಾಣಿಜ್ಯ ತೆರಿಗೆ ಅಧಿಕಾರಿ ಯತೀಶ್ ಸಿರಿಮಜಲ್ ದೀಪ ಬೆಳಗಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಟ್ರಸ್ಟಿ ಅಧ್ಯಕ್ಷರಾದ ಪೀತಾಂಬರ ಹೇರಾಜೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಲಾಯಿಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಜಯಂತಿ ಎಂ ಕೆ . ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಕ್ಷಿತ್ ಶಿವರಾಂ, ಬೆಂಗಳೂರು ಉದ್ಯಮಿ ನಾರಾಯಣ ಬೇಗೂರು, ಮೋಹನ್ ದಾಸ್ ಕೊರ್ನಯ ಬೆಳ್ತಂಗಡಿ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸಿದ ಮೋಹನ್ ದಾಸ್ ಕೊರ್ನಯ ದಂಪತಿಗಳನ್ನು ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು. ಟ್ರಸ್ಟಿನ ಕಾರ್ಯದರ್ಶಿಗಳಾದ ವಸಂತ್ ಸುವರ್ಣ ಸ್ವಾಗತಿಸಿದರು. ಟ್ರಸ್ಟಿಗಳಾದ ಶ್ರೀಮತಿ ಉಮಾ ರಂಜನ್ ರಾವ್ ಧನ್ಯವಾದ ನೀಡಿದರು. ಸುರೇಶ್ ಶೆಟ್ಟಿ ಲಾಯಿಲ ಕಾರ್ಯಕ್ರಮ ನಿರೂಪಿಸಿದರು.

ಈ ವೇಳೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ಡಿ.14: ಮುಂಡೂರು ನಾಗಾಂಬಿಕಾ ಕ್ಷೇತ್ರದಲ್ಲಿ 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳಿಂದ ಏಕಕಾಲದಲ್ಲಿ ಕಣಿತ ಭಜನೋತ್ಸವ

Suddi Udaya

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

Suddi Udaya
error: Content is protected !!