23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

ಶಿಬಾಜೆ: ಇತ್ತೀಚೆಗೆ ಸುರಿದ ಭಾರಿ ಮಳೆಗೆ ಶಿಬಾಜೆ ಗ್ರಾ.ಪಂ ವ್ಯಾಪ್ತಿಯ ಶಾಲೆತ್ತಡ್ಕ-ಕುರುಂಜ, ಬೈಕರ-ಶಾಂತಿಗುಡ್ಡೆ, ಮಾರ್‍ಯಾಡಿ-ಕಾಡುಹಿತ್ಲು ರಸ್ತೆಯು ತೀರಾ ಹದಗೆಟ್ಟಿರುವ ಬಗ್ಗೆ ಗ್ರಾಮಸಭೆಯಲ್ಲಿ ಚರ್ಚೆ ನಡೆದಿತ್ತು.


ಈ ಬಗ್ಗೆ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಂ. ಅಭಿವೃದ್ಧಿ ಅಧಿಕಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ರಸ್ತೆಗಳ ಇಕ್ಕೆಲಗಳಲ್ಲಿ ಮಣ್ಣು ಜರಿದು ಬಿದ್ದಿರುವುದು ಹಾಗೂ ಕಿರಿದಾದ ರಸ್ತೆಗಳಿಂದಾಗಿ ಈ ಸಮಸ್ಯೆ ಉಂಟಾಗಿತ್ತು. ಈ ಸಂದರ್ಭ ನಿಕಟಪೂರ್ವ ಅಧ್ಯಕ್ಷ ರತೀಶ್ ಗೌಡ ಬಿ. ಜಾಗದ ಮಾಲೀಕರೊಡನೆ ಮಾತುಕತೆ ನಡೆಸಿ ರಸ್ತೆಗಳನ್ನು ಅಗಲ ಮಾಡಲು ಒಪ್ಪಿಸಿ ಸ್ಥಳೀಯರೇ ರಿಪೇರಿ ಮಾಡಿಕೊಳ್ಳುವಂತೆ ಮಾತುಕತೆ ನಡೆಸುವುದರ ಮೂಲಕ ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ,. ಅಧ್ಯಕ್ಷೆ ಶ್ರೀಮತಿ ರತ್ನ, ಉಪಾಧ್ಯಕ್ಷ ದಿನಕರ ಕುರುಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆಗೆ ಉಪ ಪ್ರಾಂಶುಪಾಲರಿಂದ ಮೆಚ್ಚುಗೆ

Suddi Udaya

ಕೃಷಿ ಅಧ್ಯಯನಕ್ಕೆ ಸೈಕಲ್ ಯಾತ್ರೆ ಹೊರಟ ಕೇರಳದ ಯುವಕ

Suddi Udaya

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2026 ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

Suddi Udaya
error: Content is protected !!