July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

ಶಿಬಾಜೆ: ಇತ್ತೀಚೆಗೆ ಸುರಿದ ಭಾರಿ ಮಳೆಗೆ ಶಿಬಾಜೆ ಗ್ರಾ.ಪಂ ವ್ಯಾಪ್ತಿಯ ಶಾಲೆತ್ತಡ್ಕ-ಕುರುಂಜ, ಬೈಕರ-ಶಾಂತಿಗುಡ್ಡೆ, ಮಾರ್‍ಯಾಡಿ-ಕಾಡುಹಿತ್ಲು ರಸ್ತೆಯು ತೀರಾ ಹದಗೆಟ್ಟಿರುವ ಬಗ್ಗೆ ಗ್ರಾಮಸಭೆಯಲ್ಲಿ ಚರ್ಚೆ ನಡೆದಿತ್ತು.


ಈ ಬಗ್ಗೆ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಂ. ಅಭಿವೃದ್ಧಿ ಅಧಿಕಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ರಸ್ತೆಗಳ ಇಕ್ಕೆಲಗಳಲ್ಲಿ ಮಣ್ಣು ಜರಿದು ಬಿದ್ದಿರುವುದು ಹಾಗೂ ಕಿರಿದಾದ ರಸ್ತೆಗಳಿಂದಾಗಿ ಈ ಸಮಸ್ಯೆ ಉಂಟಾಗಿತ್ತು. ಈ ಸಂದರ್ಭ ನಿಕಟಪೂರ್ವ ಅಧ್ಯಕ್ಷ ರತೀಶ್ ಗೌಡ ಬಿ. ಜಾಗದ ಮಾಲೀಕರೊಡನೆ ಮಾತುಕತೆ ನಡೆಸಿ ರಸ್ತೆಗಳನ್ನು ಅಗಲ ಮಾಡಲು ಒಪ್ಪಿಸಿ ಸ್ಥಳೀಯರೇ ರಿಪೇರಿ ಮಾಡಿಕೊಳ್ಳುವಂತೆ ಮಾತುಕತೆ ನಡೆಸುವುದರ ಮೂಲಕ ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ,. ಅಧ್ಯಕ್ಷೆ ಶ್ರೀಮತಿ ರತ್ನ, ಉಪಾಧ್ಯಕ್ಷ ದಿನಕರ ಕುರುಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya

ಬೆಳ್ತಂಗಡಿ: ಡಾ. ಬಿ.ಆರ್‌. ಅಂಬೇಡ್ಕರ್‌ ಹುಟ್ಟುಹಬ್ಬ ಕಾರ್ಯಕ್ರಮ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

Suddi Udaya

ಬಜಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಚಿರಶ್ರೀ, ಉಪಮುಖ್ಯಮಂತ್ರಿ ಶ್ರೇಯಾ ಆಯ್ಕೆ

Suddi Udaya
error: Content is protected !!