25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

ಶಿಬಾಜೆ: ಇತ್ತೀಚೆಗೆ ಸುರಿದ ಭಾರಿ ಮಳೆಗೆ ಶಿಬಾಜೆ ಗ್ರಾ.ಪಂ ವ್ಯಾಪ್ತಿಯ ಶಾಲೆತ್ತಡ್ಕ-ಕುರುಂಜ, ಬೈಕರ-ಶಾಂತಿಗುಡ್ಡೆ, ಮಾರ್‍ಯಾಡಿ-ಕಾಡುಹಿತ್ಲು ರಸ್ತೆಯು ತೀರಾ ಹದಗೆಟ್ಟಿರುವ ಬಗ್ಗೆ ಗ್ರಾಮಸಭೆಯಲ್ಲಿ ಚರ್ಚೆ ನಡೆದಿತ್ತು.


ಈ ಬಗ್ಗೆ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಂ. ಅಭಿವೃದ್ಧಿ ಅಧಿಕಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ರಸ್ತೆಗಳ ಇಕ್ಕೆಲಗಳಲ್ಲಿ ಮಣ್ಣು ಜರಿದು ಬಿದ್ದಿರುವುದು ಹಾಗೂ ಕಿರಿದಾದ ರಸ್ತೆಗಳಿಂದಾಗಿ ಈ ಸಮಸ್ಯೆ ಉಂಟಾಗಿತ್ತು. ಈ ಸಂದರ್ಭ ನಿಕಟಪೂರ್ವ ಅಧ್ಯಕ್ಷ ರತೀಶ್ ಗೌಡ ಬಿ. ಜಾಗದ ಮಾಲೀಕರೊಡನೆ ಮಾತುಕತೆ ನಡೆಸಿ ರಸ್ತೆಗಳನ್ನು ಅಗಲ ಮಾಡಲು ಒಪ್ಪಿಸಿ ಸ್ಥಳೀಯರೇ ರಿಪೇರಿ ಮಾಡಿಕೊಳ್ಳುವಂತೆ ಮಾತುಕತೆ ನಡೆಸುವುದರ ಮೂಲಕ ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ,. ಅಧ್ಯಕ್ಷೆ ಶ್ರೀಮತಿ ರತ್ನ, ಉಪಾಧ್ಯಕ್ಷ ದಿನಕರ ಕುರುಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಮಾ.7: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಬೆಳಾಲು ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ

Suddi Udaya
error: Content is protected !!