March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

ನಡ: ಆಟೋ ಚಾಲಕರ ಮತ್ತು ಮಾಲಕರ ಸಂಘ ಸುರ್ಯ, ಉಜಿರೆ ಇವರ ವತಿಯಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ ಆ.18 ರಂದು ಸುರ್ಯ ದೇವಸ್ಥಾನದ ವಠಾರದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕರಾದ ಪ್ರಭಾಕರ ಮಯ್ಯ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷ ರಾಜೇಶ್ ಗೌಡ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪುಂಜಾಲಕಟ್ಟೆ ಸ.ಪ್ರದರ್ಜೆ, ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಟಿ.ಕೆ. ಶರತ್ ಕುಮಾರ್ ಮಂಚಿಬೆಟ್ಟು ಉಜಿರೆ, ,ಸುರ್ಯ ಸ.ಕಿ.ಪ್ರಾ.ಶಾಲೆ, ಮುಖ್ಯೋಪಾಧ್ಯಾಯರು ಶ್ರೀಮತಿ ಜಯ, ಸುರ್ಯ ಸ.ಕಿ.ಪ್ರಾ.ಶಾಲೆ ಸಹಶಿಕ್ಷಕಿ ಶ್ರೀಮತಿ ಶೋಭಾ, ಸುರ್ಯ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಗೀತಾ ಭಾಗವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ ಅನುವಂಶಿಕ ಆಡಳಿತ ಮೊಕ್ತೇಸರರು ಡಾ। ಸತೀಶ್ಚಂದ್ರ ಸುರ್ಯಗುತ್ತು, ಭಾರತೀಯ ಮಜ್ದೂರು ಸಂಘ ಪ್ರಧಾನ ಕಾರ್ಯದಶಿ೯ ಜಯರಾಜ ಸಾಲಿಯಾನ್ , ಸುರ್ಯ ಬ್ಯಾಂಕ್ ಆಫ್ ಬರೋಡ ಶಾಖಾ ಪ್ರಭಂಧಕರು ಶಿವಪ್ರಸಾದ್, ನಡ ಗ್ರಾ. ಪಂ., ಅಧ್ಯಕ್ಷೆ ಶ್ರೀಮತಿ ಮಂಜುಳಾ, ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಅಧ್ಯಕ್ಷ ಕೃಷ್ಣ ಕುಮಾರ್ ಭಾಗವಹಿಸಿದ್ದರು.


ಅಂಗನವಾಡಿ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಿಗೆ ಹಾಗೂ ಊರವರಿಗೆ ಮತ್ತು ಸಾರ್ವಜನಿಕರಿಗೆ ಕ್ರೀಡಾಕೂಟ ನಡೆದು ಬಹುಮಾನ ವಿತರಿಸಲಾಯಿತು.
ಗೌರವಾಧ್ಯಕ್ಷ ಗಣೇಶ್ ಗೌಡ, ಅಧ್ಯಕ್ಷ ರಾಜೇಶ್ ಗೌಡ, ಉಪಾಧ್ಯಕ್ಷ ಅರುಣಾಕರ ಗೌಡ, ಕಾಯ೯ದಶಿ೯ ದಿನೇಶ್ ಗೌಡ, ಜೊತೆ ಕಾರ್ಯದರ್ಶಿ ಸುಕೇಶ್ ಪೂಜಾರಿ, ಕೋಶಾಧಿಕಾರಿ ಜಗದೀಶ ಗೌಡ ಹಾಗೂ ಆಟೋ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ ಬಿಡುಗಡೆ

Suddi Udaya

ಬೆಳಾಲು : ಕಾಡoಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ

Suddi Udaya

ಕಳೆಂಜ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya
error: Content is protected !!