22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

ನಡ: ಆಟೋ ಚಾಲಕರ ಮತ್ತು ಮಾಲಕರ ಸಂಘ ಸುರ್ಯ, ಉಜಿರೆ ಇವರ ವತಿಯಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ ಆ.18 ರಂದು ಸುರ್ಯ ದೇವಸ್ಥಾನದ ವಠಾರದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕರಾದ ಪ್ರಭಾಕರ ಮಯ್ಯ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷ ರಾಜೇಶ್ ಗೌಡ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪುಂಜಾಲಕಟ್ಟೆ ಸ.ಪ್ರದರ್ಜೆ, ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಟಿ.ಕೆ. ಶರತ್ ಕುಮಾರ್ ಮಂಚಿಬೆಟ್ಟು ಉಜಿರೆ, ,ಸುರ್ಯ ಸ.ಕಿ.ಪ್ರಾ.ಶಾಲೆ, ಮುಖ್ಯೋಪಾಧ್ಯಾಯರು ಶ್ರೀಮತಿ ಜಯ, ಸುರ್ಯ ಸ.ಕಿ.ಪ್ರಾ.ಶಾಲೆ ಸಹಶಿಕ್ಷಕಿ ಶ್ರೀಮತಿ ಶೋಭಾ, ಸುರ್ಯ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಗೀತಾ ಭಾಗವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ ಅನುವಂಶಿಕ ಆಡಳಿತ ಮೊಕ್ತೇಸರರು ಡಾ। ಸತೀಶ್ಚಂದ್ರ ಸುರ್ಯಗುತ್ತು, ಭಾರತೀಯ ಮಜ್ದೂರು ಸಂಘ ಪ್ರಧಾನ ಕಾರ್ಯದಶಿ೯ ಜಯರಾಜ ಸಾಲಿಯಾನ್ , ಸುರ್ಯ ಬ್ಯಾಂಕ್ ಆಫ್ ಬರೋಡ ಶಾಖಾ ಪ್ರಭಂಧಕರು ಶಿವಪ್ರಸಾದ್, ನಡ ಗ್ರಾ. ಪಂ., ಅಧ್ಯಕ್ಷೆ ಶ್ರೀಮತಿ ಮಂಜುಳಾ, ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಅಧ್ಯಕ್ಷ ಕೃಷ್ಣ ಕುಮಾರ್ ಭಾಗವಹಿಸಿದ್ದರು.


ಅಂಗನವಾಡಿ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಿಗೆ ಹಾಗೂ ಊರವರಿಗೆ ಮತ್ತು ಸಾರ್ವಜನಿಕರಿಗೆ ಕ್ರೀಡಾಕೂಟ ನಡೆದು ಬಹುಮಾನ ವಿತರಿಸಲಾಯಿತು.
ಗೌರವಾಧ್ಯಕ್ಷ ಗಣೇಶ್ ಗೌಡ, ಅಧ್ಯಕ್ಷ ರಾಜೇಶ್ ಗೌಡ, ಉಪಾಧ್ಯಕ್ಷ ಅರುಣಾಕರ ಗೌಡ, ಕಾಯ೯ದಶಿ೯ ದಿನೇಶ್ ಗೌಡ, ಜೊತೆ ಕಾರ್ಯದರ್ಶಿ ಸುಕೇಶ್ ಪೂಜಾರಿ, ಕೋಶಾಧಿಕಾರಿ ಜಗದೀಶ ಗೌಡ ಹಾಗೂ ಆಟೋ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Related posts

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಜೋಡುಸ್ಥಾನ ರಸ್ತೆಗೆ ಪದ್ಮವಿಭೂಷಣ ಡಾ. ಡಿ ವೀರೇಂದ್ರ ಹೆಗ್ಗಡೆ ರಸ್ತೆ ಎಂದು ನಾಮಕರಣ

Suddi Udaya

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಲಿಂಗ ಸಮಾನತೆ ಪ್ರತಿಪಾದಿಸಲು ಮಹಿಳಾ ದಿನಾಚರಣೆ ಅವಶ್ಯಕ: ಕರ್ತವ್ಯದೊಂದಿಗೆ ಮಹಿಳೆಯರೂ ಸಾಧನೆಯ ಪಥದತ್ತ ಶ್ಲಾಘನೀಯ: ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸೌಮ್ಯಲತಾ ಎನ್.

Suddi Udaya
error: Content is protected !!