September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

ಸನಾತನ ಧರ್ಮದಲ್ಲಿ ರಕ್ಷಾ ಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಈ ದಿನ ಸಹೋದರಿಯರು ತಮ್ಮ ಸಹೋದರರಿಗೆ ಆರತಿ ಬೆಳಗಿಸಿ, ಪ್ರೀತಿಯ ಪ್ರತಿಕವೆಂದು ರಾಖಿಯನ್ನು ಕಟ್ಟುತ್ತಾರೆ. ಸಹೋದರರು ಏನಾದರೂ ಒಂದು ವಸ್ತುವನ್ನು ಉಡುಗೊರೆಯಾಗಿ ನೀಡಿ ಆಶೀರ್ವಾದ ನೀಡುತ್ತಾರೆ. ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ. ಇಬ್ಬರಲ್ಲಿನ ಕೊಡುಕೊಳ್ಳುವ ಲೆಕ್ಕಾಚಾರ ಕಡಿಮೆಯಾಗಿ ಈಶ್ವರನತ್ತ ಪ್ರಯಾಣಿಸುವ ಅವಕಾಶವನ್ನು ಒದಗಿಸುತ್ತದೆ. ಹಾಗೂ ಈ ಹಬ್ಬವು ಇಬ್ಬಾಗವಾಗಿರುವ ಸಮಾಜವನ್ನು ಒಗ್ಗೂಡಿಸುವ ಒಂದು ಸಂಧಿಯಾಗಿದೆ. ಇದರಿಂದ ಕುಟುಂಬದಲ್ಲಿರುವ ಕಲಹ ಶಾಂತವಾಗುತ್ತದೆ. ಮನಸ್ತಾಪ ದೂರವಾಗುತ್ತದೆ ಮತ್ತು ಸಾಮೂಹಿಕ ಸಂಕಲ್ಪ ಶಕ್ತಿ ಕಾರ್ಯಗತವಾಗುತ್ತದೆ. ಈ ಉದ್ದೇಶದಿಂದ ಹಿಂದೂ ಜನಜಾಗೃತಿ ಸಮಿತಿಯು ಸಹೋದರರಿಗೆ ರಾಖಿಯನ್ನು ಕಟ್ಟುವ ಮುಖಾಂತರ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಯಿತು.

ಈ ನಿಟ್ಟಿನಲ್ಲಿ ಶಾಸಕ ಹರೀಶ್ ಪೂಂಜಾರವರಿಗೆ, ಪತ್ರಕರ್ತರಿಗೆ, ಹಿಂದುತ್ವನಿಷ್ಠರಿಗೆ ಹಾಗೂ ಧರ್ಮಪ್ರೇಮಿಗಳಿಗೆ ರಾಕಿ ಕಟ್ಟುವ ಮೂಲಕ ರಕ್ಷಾಬಂಧನದ ಶುಭಾಶಯವನ್ನು ಹೇಳಲಾಯಿತು.

Related posts

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದಿಂದ ಗೌರವಾರ್ಪಣೆ

Suddi Udaya

ಬಜಿರೆ: ಚಿರತೆ ಓಡಾಟ-ಜನರಲ್ಲಿ ಆತಂಕ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya

ಸವಣಾಲು: ಪದ್ಮನಾಭ ಶೆಟ್ಟಿ ನಿಧನ

Suddi Udaya

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ

Suddi Udaya
error: Content is protected !!